ಹರ್ಷ ಹತ್ಯೆ ಬಳಿಕ ಶಾಂತಿ ಭಂಗ, ವಿಚಾರಣೆಗೆ ಹಾಜರಾಗದವರಿಗೆ ನೊಟೀಸ್, ಎಷ್ಟು ಜನಕ್ಕೆ ನೊಟೀಸ್ ಕೊಡಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 ಮಾರ್ಚ್ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಸಾರ್ವಜನಿಕರ ಶಾಂತಿಭಂಗಕ್ಕೆ ಕುತ್ತು ತಂದ ಆರೋಪದ ಅಡಿ 379 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗದವರ ಮೇಲೆ ತಹಸೀಲ್ದಾರ್‌ ಕೋರ್ಟ್‌ನಿಂದ ವಾರಂಟ್‌ ಜಾರಿ ಮಾಡಲಾಗಿದೆ.

Shimoga Nanjappa Hospital

ಮಂಗಳವಾರ ಮತ್ತು ಬುಧವಾರ 309 ಮಂದಿಗೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ತಹಸೀಲ್ದಾರ್‌ ಕೋರ್ಟ್ ನೋಟಿಸ್ ನೀಡಿತ್ತು. ಆದರೆ ಅದರಲ್ಲಿ ಬಹಳಷ್ಟು ಮಂದಿ ಗೈರು ಹಾಜರಾಗಿದ್ದಾರೆ.

ಮಂಗಳವಾರ 209ರಲ್ಲಿ 150 ಮತ್ತು ಬುಧವಾರ 100ರಲ್ಲಿ 90 ಮಂದಿ ಗೈರು ಹಾಜರಾಗಿದ್ದಾರೆ. ಹಾಗಾಗಿ ಗೈರು ಹಾಜರಾದವರಿಗೆ ವಾರಂಟ್ ನೀಡಲಾಗಿದೆ.

ಹರ್ಷನ ಶವಯಾತ್ರೆ ವೇಳೆ ಕಲ್ಲು ತೂರಾಟವಾಗಿತ್ತು. ಈ ವೇಳೆ ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಶಾಂತಿಭಂಗ ಉಂಟು ಮಾಡಿದ ಆರೋಪದ ಅಡಿ 379 ಜನರಿಗೆ ನೋಟಿಸ್ ನೀಡಲಾಗಿತ್ತು. ಮೊದಲ ಹಂತದಲ್ಲಿ 70 ಮಂದಿಗೆ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment