SHIVAMOGGA LIVE NEWS | 1 JULY 2024
SHIMOGA : ಅಂಗಡಿ ಮುಂದೆ ಬಿದ್ದಿದ್ದ ಬಂಗಾರದ ಸರವನ್ನು ಪೊಲೀಸರ ಮೂಲಕ ಮಾಲೀಕರಿಗೆ ಒಪ್ಪಿಸಿ ಟೈಲರ್ (Tailor) ಒಬ್ಬರು ಪ್ರಾಮಾಣಿಕತೆ ಮರೆದಿದ್ದಾರೆ. ಬಿ.ಹೆಚ್.ರಸ್ತೆಯ ಸಂಗಮ್ ಟೈಲರ್ ಅಂಗಡಿ ಮಾಲೀಕ ಕುಮಾರ್ ಸರವನ್ನು ಮಾಲೀಕರಿಗೆ ಹಸ್ತಾಂತರಿಸಿದರು.
ಬುದ್ದನಗರದ ರಂಜಿತಾ ಮತ್ತು ಅವರ ತಾಯಿ ರಾಜೇಶ್ವರಿ ಅವರು ಬಿ.ಹೆಚ್.ರಸ್ತೆಯ ಸಂಗಮ್ ಟೈಲರ್ ಶಾಪ್ ಎದುರು ಶನಿವಾರ ಸಂಜೆ ಬೈಕ್ನಲ್ಲಿ ಹೋಗುತ್ತಿದ್ದಾಗ 32 ಗ್ರಾಂನ ಬಂಗಾರದ ಸರ ಬಿದ್ದಿತ್ತು. ಅದು ಕುಮಾರ್ ಅವರಿಗೆ ಸಿಕ್ಕಿತ್ತು. ಅದನ್ನು ಕುಮಾರ್ ಅವರು ಕೋಟೆ ಠಾಣೆ ಪೊಲೀಸರಿಗೆ ನೀಡಿದ್ದರು. ಕೋಟೆ ಠಾಣೆ ಇನ್ಸ್ಪೆಕ್ಟರ್ ಗುರು ಬಸವರಾಜ್ ಅವರ ಸಮ್ಮುಖದಲ್ಲಿ ಸರವನ್ನು ರಾಜೇಶ್ವರಿ ಅವರಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ – ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200