SHIVAMOGGA LIVE NEWS | 10 OCTOBER 2023
SHIMOGA : ತಮಿಳು ಚಿತ್ರ (Tamil Cinema) ಪ್ರದರ್ಶನ ವಿರೋಧಿಸಿ, ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವೀರಭದ್ರೇಶ್ವರ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿತು. ಇದೆ ವೇಳೆ ತಮಿಳು ಚಿತ್ರದ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು.
![]() |
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಯುತ್ತಿದೆ. ಕಾವೇರಿ ನದಿಯಿಂದ ನೀರು ಹರಿಸುವುದು ನಿಲ್ಲಿಸುವ ತನಕ ನಗರದಲ್ಲಿ ತಮಿಳು ಚಲನಚಿತ್ರ ಪ್ರದರ್ಶಿಸಬಾರದು. ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿತು. ವಾಟಾಳ್ ಮಂಜುನಾಥ್, ಪ್ರಶಾಂತ್, ನಿತಿನ್ ರೆಡ್ಡಿ, ಸತೀಶ್, ಸಂತೋಷ್ ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಟ್ಸಪ್ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್, ಏನದು ವಿಡಿಯೋ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200