SHIVAMOGGA LIVE NEWS
SHIMOGA | ದ್ವಿಚಕ್ರ ವಾಹನಕ್ಕೆ ಟಾಟಾ ಸುಮೋ (TATA SUMO) ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತ ಪಡಿಸಿದ ವಾಹನವನ್ನು ಹುಡುಕಿದಾಗ ಚಾಲಕ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದ. ಆದರೆ ಈತನಕ ನೆರವು ನೀಡದ ಹಿನ್ನೆಲೆ ಗಾಯಾಳುಗಳು ಪ್ರಕರಣ ದಾಖಲು ಮಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ವಿದ್ಯಾನಗರದ ಗಣೇಶ್ ಭವನ ಬಸ್ ಸ್ಟಾಪ್ ಬಳಿ ಘಟನೆ ಸಂಭವಿಸಿದೆ. ಗಾಂಧಿ ಬಜಾರ್ ನಿಂದ ಮಲವಗೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ, ಹಿಂಬದಿಯಿಂದ ವೇಗವಾಗಿ ಬಂದ ಟಾಟಾ ಸುಮೋ ವಾಹನ ಡಿಕ್ಕಿ ಹೊಡಿದೆ.
ಗಾಯಗೊಂಡಿದ್ದ ದಂಪತಿ (TATA SUMO)
ಘಟನೆಯಲ್ಲಿ ಮಲವಗೊಪ್ಪದ ಕಿರಣ್ ಕುಮಾರ್ ಮತ್ತು ಅವರ ಪತ್ನಿ ಶೋಭಾ ಅವರು ಗಾಯಗೊಂಡಿದ್ದರು. ಸೆ.19ರಂದು ಸಂಜೆ ದಂಪತಿ ಗಾಂಧಿ ಬಜಾರ್ ಗೆ ಬಂದಿದ್ದು ಅಲ್ಲಿಂದ ಮಲವಗೊಪ್ಪದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಾಟಾ ಸುಮೋ (TATA SUMO) ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ದಾರಿಯಲ್ಲಿ ಹೋಗುತ್ತಿದ್ದವರು ದಂಪತಿಗೆ ನೆರವಾಗಿದ್ದಾರೆ. ಕೂಡಲೆ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಕಾರು ಹುಡುಕಿದ ದಂಪತಿ
ಕಿರಣ್ ಕುಮಾರ್ ಅವರ ಎಡ ಭುಜಕ್ಕೆ ಪೆಟ್ಟಾಗಿತ್ತು. ಶೋಭಾ ಅವರಿ ಕೈ, ಕಾಲುಗಳಿಗೆ ಗಾಯವಾಗಿತ್ತು. ತಮಗೆ ಅಪಘಾತಪಡಿಸಿದ ಕಾರಿನ (TATA SUMO) ನಂಬರ್ ಸಿಕ್ಕಿದ್ದರಿಂದ ಚಾಲಕನನ್ನು ಪತ್ತೆ ಮಾಡಿದರು. ಈ ವೇಳೆ ‘ರಾಜಿ ಮಾಡಿಕೊಳ್ಳೋಣ, ಚಿಕಿತ್ಸೆ ವೆಚ್ಚ ಭರಿಸುವುದಾಗಿ’ ಆತ ತಿಳಿಸಿದ್ದ. ಆದರೆ ಚಿಕಿತ್ಸೆ ವೆಚ್ಚವನ್ನು ಭರಿಸಿಲ್ಲ ಎಂದು ಆರೋಪಿಸಿ ದಂಪತಿ ದೂರು ನೀಡಿದ್ದಾರೆ.
ಸಂಚಾರಿ ಠಾಣೆಯಲ್ಲಿ ಟಾಟಾ ಸುಮೋ ಕಾರು ಚಾಲಕ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಈಜಲು ಹೋಗಿದ್ದ ಯುವಕ ಉಸಿರುಗಟ್ಟಿ ಸಾವು, ಸ್ವಿಮ್ಮಿಂಗ್ ಪೂಲ್ ಮಾಲೀಕನ ವಿರುದ್ಧ ಕೇಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






