SHIVAMOGGA LIVE NEWS | 9 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಲು ಬಸ್ ಹತ್ತುವ ವೇಳೆ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ 4.85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.
ಚಿಕ್ಕಮಗಳೂರಿನ ಶಿಕ್ಷಕಿ ವೈಲೆಟ್ ವಿಲ್ಮಾ ಗೋನ್ಸಾಲ್ವೆಸ್ ಅವರು ಶಿವಮೊಗ್ಗದಲ್ಲಿ ತಮ್ಮ ಸ್ನೇಹಿತರೊಬ್ಬರ ಮದುವೆ ಮುಗಿಸಿ ಊರಿಗೆ ಮರಳುತ್ತಿದ್ದರು. ರಾತ್ರಿ 10 ಗಂಟೆಗೆ ಶಿವಮೊಗ್ಗದ ಕೆಎಸ್ಆರ್ಟಿಸ್ ಬಸ್ ನಿಲ್ದಾಣದ ಪ್ಲಾಟ್ ಫಾರಂ 3ರಲ್ಲಿ ಬಸ್ ಹತ್ತುವಾಗ ರಶ್ ಇತ್ತು. ಬಸ್ ಹತ್ತಿದ ಬಳಿಕ ಕಂಡಕ್ಟರ್ಗೆ ಆಧಾರ್ ಕಾರ್ಡ್ ತೋರಿಸಲು ವ್ಯಾನಿಟಿ ಬ್ಯಾಗ್ಗೆ ಕೈ ಹಾಕಿದಾಗ ಜಿಪ್ ತೆಗೆದಿರುವುದು ಗೊತ್ತಾಗಿದೆ. ಒಳಗಿದ್ದ ಪರ್ಸ್ ಹುಡುಕಿದಾಗ ಅದು ನಾಪತ್ತೆಯಾಗಿತ್ತು.
ಪರ್ಸ್ನಲ್ಲಿ ಎರಡು ಎಳೆಯ ಮುತ್ತಿನ ಸರ, ಮುತ್ತಿನ ಜುಮ್ಕಿ, ಬಳೆ, ಉಂಗುರ ಇದ್ದವು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ವಿದ್ಯುತ್ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್ – ಫಟಾಫಟ್ ನ್ಯೂಸ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






