ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020
ರಾಜ್ಯದ ವಿಶೇಷಚೇತನರ ಶಾಲೆಗಳಲ್ಲಿ ಸೇವಾನಿರತರಾಗಿರುವ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಗೌರವಧನ ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾ ವಿಶೇಷ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘದ ವತಿಯಿಂದ ಡಿಸಿ ಕಚೇರಿ ಎದುರು ಸಾಂಕೇತಿಕ ಮುಷ್ಕರ ನಡೆಸಲಾಯಿತು.
ಅನುದಾನ ನೀತಿ ಸಂಹಿತೆ ಪ್ರಕಾರ ರಾಜ್ಯದ ಕೇವಲ 32 ಸಂಸ್ಥೆಗಳಿಗೆ ಅನುದಾನ ಸಿಗುತ್ತಿದೆ. ಅನುದಾನಿತ ಶಾಲಾ ಶಿಕ್ಷಕರಿಗೆ ದೊರಕುವ ರೀತಿಯಲ್ಲೇ, ಸಂಬಳ ನೀಡುವ ವ್ಯವಸ್ಥೆ ಆಗಬೇಕಿದೆ. ವಿಶೇಷ ಶಿಕ್ಷಕರಿಗೆ 6,500 ರೂ, ಇತರೆ ಸಿಬ್ಬಂದಿಗಳಿಗೆ 4000 ರೂ. ಗೌರವ ಧನ ಸಿಗುತ್ತಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಸಂದರ್ಭ 13,500 ರೂ, ಹಾಗೂ 9,000 ರೂ.ಗೆ ಗೌರವಧನ ಏರಿಕೆಯಾಗಿತ್ತು. 2014ರಿಂದ ಇದುವರೆಗೂ ವೇತನ ಹೆಚ್ಚಳ ಮಾಡಿಲ್ಲ ಎಂದು ದೂರಿದರು.
ಶಿಶುಕೇಂದ್ರೀಕೃತ ಸಹಾಯಧನ ಯೊಜನೆಯಡಿ ಸುಮಾರು 141 ವಿಶೇಷ ಶಾಲೆಗಳು ರಾಜ್ಯ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುದಾನ ಪಡೆಯುತ್ತಿವೆ. ಇದರಲ್ಲಿ ಸೇವಾ ನಿರತರಾದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಕೇಂದ್ರ ಸರ್ಕಾರ ನಿಗದಿ ಮಾಡಿದ್ದ ಕನಿಷ್ಟ ವೇತನ ಕೊಡಬೇಕೆಂದು ಆಗ್ರಹಿಸಿದರು.
ಸಂಘದ ಪ್ರಮುಖರಾದ ರಾಮಪ್ಪ ಜಿ.ಬಿ., ಪ್ರಿವೇಶ ಸಬಾಸ್ಟಿನ್, ರವೀಂದ್ರ, ಪುಟ್ಟರಾಜು ಕೆ.ಬಿ., ಗಾಯತ್ರಿ ನಾಯಕ್, ತೇಜಪ್ಪ, ಈರಪ್ಪ ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















