ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020
ರಾಜ್ಯದ ವಿಶೇಷಚೇತನರ ಶಾಲೆಗಳಲ್ಲಿ ಸೇವಾನಿರತರಾಗಿರುವ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಗೌರವಧನ ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾ ವಿಶೇಷ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘದ ವತಿಯಿಂದ ಡಿಸಿ ಕಚೇರಿ ಎದುರು ಸಾಂಕೇತಿಕ ಮುಷ್ಕರ ನಡೆಸಲಾಯಿತು.
ಅನುದಾನ ನೀತಿ ಸಂಹಿತೆ ಪ್ರಕಾರ ರಾಜ್ಯದ ಕೇವಲ 32 ಸಂಸ್ಥೆಗಳಿಗೆ ಅನುದಾನ ಸಿಗುತ್ತಿದೆ. ಅನುದಾನಿತ ಶಾಲಾ ಶಿಕ್ಷಕರಿಗೆ ದೊರಕುವ ರೀತಿಯಲ್ಲೇ, ಸಂಬಳ ನೀಡುವ ವ್ಯವಸ್ಥೆ ಆಗಬೇಕಿದೆ. ವಿಶೇಷ ಶಿಕ್ಷಕರಿಗೆ 6,500 ರೂ, ಇತರೆ ಸಿಬ್ಬಂದಿಗಳಿಗೆ 4000 ರೂ. ಗೌರವ ಧನ ಸಿಗುತ್ತಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಸಂದರ್ಭ 13,500 ರೂ, ಹಾಗೂ 9,000 ರೂ.ಗೆ ಗೌರವಧನ ಏರಿಕೆಯಾಗಿತ್ತು. 2014ರಿಂದ ಇದುವರೆಗೂ ವೇತನ ಹೆಚ್ಚಳ ಮಾಡಿಲ್ಲ ಎಂದು ದೂರಿದರು.
ಶಿಶುಕೇಂದ್ರೀಕೃತ ಸಹಾಯಧನ ಯೊಜನೆಯಡಿ ಸುಮಾರು 141 ವಿಶೇಷ ಶಾಲೆಗಳು ರಾಜ್ಯ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುದಾನ ಪಡೆಯುತ್ತಿವೆ. ಇದರಲ್ಲಿ ಸೇವಾ ನಿರತರಾದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಕೇಂದ್ರ ಸರ್ಕಾರ ನಿಗದಿ ಮಾಡಿದ್ದ ಕನಿಷ್ಟ ವೇತನ ಕೊಡಬೇಕೆಂದು ಆಗ್ರಹಿಸಿದರು.
ಸಂಘದ ಪ್ರಮುಖರಾದ ರಾಮಪ್ಪ ಜಿ.ಬಿ., ಪ್ರಿವೇಶ ಸಬಾಸ್ಟಿನ್, ರವೀಂದ್ರ, ಪುಟ್ಟರಾಜು ಕೆ.ಬಿ., ಗಾಯತ್ರಿ ನಾಯಕ್, ತೇಜಪ್ಪ, ಈರಪ್ಪ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200