SHIVAMOGGA LIVE NEWS | SHIMOGA | 23 ಏಪ್ರಿಲ್ 2022
ತಾಂತ್ರಿಕ ದೋಷ ಕಾಣಿಸಿಕೊಂಡು ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿ ನಿಂತುಬಿಟ್ಟಿದೆ. ಇದರಿಂದ ನೆಹರೂ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಗೋಪಿ ಸರ್ಕಲ್ ಕಡೆಯಿಂದ ನೆಹರೂ ರಸ್ತೆಯಲ್ಲಿ ಬಂದ ಸಿಟಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜೆಡಿಎಸ್ ಕಚೇರಿ ಸಮೀಪ ಘಟನೆ ಸಂಭವಿಸಿದೆ. ರಸ್ತೆಗೆ ಅಡ್ಡಲಾಗಿ ಬಸ್ ನಿಂತಿದೆ. ಬಸ್ಸನ್ನು ತಳ್ಳುವುದಕ್ಕು ಸಾಧ್ಯವಾಗದ ಹಿನ್ನೆಲೆ ರಸ್ತೆಯಲ್ಲೇ ನಿಂತಿದೆ.
ಬಸ್ ಅಡ್ಡಾದಿಡ್ಡಿ ನಿಂತಿರುವುದರಿಂದ ಗೋಪಿ ಸರ್ಕಲ್ ಕಡೆಯಿಂದ ನೆಹರೂ ರಸ್ತೆ ಮೂಲಕ ಅಮೀರ್ ಅಹಮದ್ ಸರ್ಕಲ್ ಕಡೆಗೆ ವಾಹನಗಳು ತೆರಳದಂತಾಗಿದೆ. ಇದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ದಟ್ಟಣೆ ನಿಯಂತ್ರಿಸುತ್ತಿದ್ದಾರೆ.
ಇದನ್ನೂ ಓದಿ | ತೀರ್ಥಹಳ್ಳಿಯಲ್ಲಿ ಮುಂದುವರೆದ ಬಸ್ ಸಂಘರ್ಷ, KSRTC ಬಸ್ ಡ್ರೈವರ್, ಕಂಡಕ್ಟರ್ ಮೇಲೆ ಹಲ್ಲೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200