ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 APRIL 2024
SHIMOGA : ಗಾಂಧಿ ಬಜಾರ್ನ ಕಾಳಿಕ ಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಆಭರಣ, ಹಣ ಕಳ್ಳತನ ಮಾಡಲಾಗಿದೆ. ದೇವಿಯ ಮೂರ್ತಿಯನ್ನು ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನದ ಅಧ್ಯಕ್ಷ ರಮೇಶ್ ದೂರು ನೀಡಿದ್ದಾರೆ.
ಏ.28ರಂದು ಬೆಳಗ್ಗೆ ದೇವಸ್ಥಾನದ ಮ್ಯಾನೇಜರ್ ಬಂದಾಗ ದೇಗುಲದ ಬಾಗಿಲಿನ ಬೀಗ ಮರಿದಿರುವುದು ಗೊತ್ತಾಗಿದೆ. ಗರ್ಭಗುಡಿಗೆ ಹಾಕಿದ್ದ ಬೀಗಗಳನ್ನು ಮುರಿಯಲಾಗಿತ್ತು. ಒಟ್ಟು 1.97 ಲಕ್ಷ ರೂ. ಮೌಲ್ಯ ಚಿನ್ನ, ಬೆಳ್ಳಿಯ ಆಭರಣ, 52 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಇನ್ನು, ದೇವಿಯ ಮೂರ್ತಿಯ ಮುಖದ ಭಾಗದಲ್ಲಿ ಗೀಚಿ ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಂಕಿ, ಸುಟ್ಟು ಕರಕಲಾಯ್ತು ಅಂಗಡಿ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





