ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್ನಲ್ಲಿ ಉಗ್ರರ ದಾಳಿಗೆ (Terrorist Attack) ಸಾವನ್ನಪ್ಪಿದವರ ಮೃತದೇಹಗಳ ರವಾನೆಗೆ ಅಂತಿಮ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್ ಅವರ ಪಾರ್ಥೀವ ಶರೀರದ ಮುಂದೆ ಅವರ ಪತ್ನಿ ಪಲ್ಲವಿ ಕಣ್ಣಿರಾದರು. ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪಲ್ಲವಿ ಅವರನ್ನು ಸಂತೈಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅನಂತನಾಗ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರಿನ ಭರತ್ ಭೂಷಣ್, ಮಧುಸೂದನ್ ಸೋಮಿಶೆಟ್ಟಿ ಮತ್ತು ಶಿವಮೊಗ್ಗದ ಮಂಜುನಾಥ ರಾವ್ ಅವರ ಮೃತದೇಹಗಳು ಇಲ್ಲಿಯೇ ಇರಿಸಲಾಗಿದೆ.
ಪ್ರತ್ಯೇಕ ಬಾಕ್ಸ್ನಲ್ಲಿ ಮೃತದೇಹಗಳು
ಮೃತದೇಹಗಳನ್ನು ಪ್ರತ್ಯೇಕ ಬಾಕ್ಸ್ನಲ್ಲಿ ಇರಿಸಲಾಗಿದೆ. ಅವುಗಳ ಮೇಲೆ ಮೃತರ ಹೆಸರು, ವಿಳಾಸ, ಸಂಬಂಧಿಕರ ದೂರವಾಣಿ ಸಂಖ್ಯೆ ಸೇರಿದಂತೆ ವಿವಿಧ ಮಾಹಿತಿ ಬರೆಯಲಾಗಿದೆ. ಕರ್ನಾಟಕಕ್ಕೆ ರವಾನಿಸಬೇಕಿರುವ ಮೂವರ ಮೃತದೇಹಗಳನ್ನು ಒಂದೆಡೆ ಇರಿಸಲಾಗಿದೆ. ಸಚಿವ ಸಂತೋಷ್ ಲಾಡ್ ಅವರು ಮೃತದೇಹಗಳ ಇರಿಸಿದ್ದ ಬಾಕ್ಸ್ಗಳನ್ನು ಪರಿಶೀಲಿಸಿದ ಸಂಬಂಧಿಕರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ » ಕಾಶ್ಮೀರದಲ್ಲಿ ಉಗ್ರರ ದಾಳಿ, ಶಿವಮೊಗ್ಗದ ಉದ್ಯಮಿ ಸಾವು, ಈವರೆಗೂ ಏನೆಲ್ಲ ಬೆಳವಣಿಗೆ ಆಗಿದೆ?
ಕಣೀರಾದ ಪಲ್ಲವಿ, ಸಚಿವರ ಅಭಯ
ಇನ್ನು, ಮಂಜುನಾಥ್ ರಾವ್ ಅವರ ಮೃತದೇಹವನ್ನು ಪರಿಶೀಲಿಸಿದ ಅವರ ಪತ್ನಿ ಪಲ್ಲವಿ ಕಣ್ಣೀರಾದರು. ಸಚಿವ ಸಂತೋಷ್ ಲಾಡ್ ಅವರು ಪಲ್ಲವಿಯವಿಗೆ ಸಮಾಧಾನ ಹೇಳಿ, ಧೈರ್ಯ ತುಂಬಿದರು.


LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





