ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್ನಲ್ಲಿ ಉಗ್ರರ ದಾಳಿಗೆ (Terrorist Attack) ಸಾವನ್ನಪ್ಪಿದವರ ಮೃತದೇಹಗಳ ರವಾನೆಗೆ ಅಂತಿಮ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್ ಅವರ ಪಾರ್ಥೀವ ಶರೀರದ ಮುಂದೆ ಅವರ ಪತ್ನಿ ಪಲ್ಲವಿ ಕಣ್ಣಿರಾದರು. ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪಲ್ಲವಿ ಅವರನ್ನು ಸಂತೈಸಿದರು.
ಅನಂತನಾಗ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರಿನ ಭರತ್ ಭೂಷಣ್, ಮಧುಸೂದನ್ ಸೋಮಿಶೆಟ್ಟಿ ಮತ್ತು ಶಿವಮೊಗ್ಗದ ಮಂಜುನಾಥ ರಾವ್ ಅವರ ಮೃತದೇಹಗಳು ಇಲ್ಲಿಯೇ ಇರಿಸಲಾಗಿದೆ.
ಪ್ರತ್ಯೇಕ ಬಾಕ್ಸ್ನಲ್ಲಿ ಮೃತದೇಹಗಳು
ಮೃತದೇಹಗಳನ್ನು ಪ್ರತ್ಯೇಕ ಬಾಕ್ಸ್ನಲ್ಲಿ ಇರಿಸಲಾಗಿದೆ. ಅವುಗಳ ಮೇಲೆ ಮೃತರ ಹೆಸರು, ವಿಳಾಸ, ಸಂಬಂಧಿಕರ ದೂರವಾಣಿ ಸಂಖ್ಯೆ ಸೇರಿದಂತೆ ವಿವಿಧ ಮಾಹಿತಿ ಬರೆಯಲಾಗಿದೆ. ಕರ್ನಾಟಕಕ್ಕೆ ರವಾನಿಸಬೇಕಿರುವ ಮೂವರ ಮೃತದೇಹಗಳನ್ನು ಒಂದೆಡೆ ಇರಿಸಲಾಗಿದೆ. ಸಚಿವ ಸಂತೋಷ್ ಲಾಡ್ ಅವರು ಮೃತದೇಹಗಳ ಇರಿಸಿದ್ದ ಬಾಕ್ಸ್ಗಳನ್ನು ಪರಿಶೀಲಿಸಿದ ಸಂಬಂಧಿಕರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ » ಕಾಶ್ಮೀರದಲ್ಲಿ ಉಗ್ರರ ದಾಳಿ, ಶಿವಮೊಗ್ಗದ ಉದ್ಯಮಿ ಸಾವು, ಈವರೆಗೂ ಏನೆಲ್ಲ ಬೆಳವಣಿಗೆ ಆಗಿದೆ?
ಕಣೀರಾದ ಪಲ್ಲವಿ, ಸಚಿವರ ಅಭಯ
ಇನ್ನು, ಮಂಜುನಾಥ್ ರಾವ್ ಅವರ ಮೃತದೇಹವನ್ನು ಪರಿಶೀಲಿಸಿದ ಅವರ ಪತ್ನಿ ಪಲ್ಲವಿ ಕಣ್ಣೀರಾದರು. ಸಚಿವ ಸಂತೋಷ್ ಲಾಡ್ ಅವರು ಪಲ್ಲವಿಯವಿಗೆ ಸಮಾಧಾನ ಹೇಳಿ, ಧೈರ್ಯ ತುಂಬಿದರು.


ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200