SHIVAMOGGA LIVE NEWS | 26 FEBRUARY 2024
SHIMOGA : ಜನಪ್ರಿಯ ‘ಥಟ್ ಅಂತ ಹೇಳಿʼ ರಸಪ್ರಶ್ನೆ ಕಾರ್ಯಕ್ರಮ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆಯಿತು. ಡಾ. ನಾ.ಸೋಮೇಶ್ವರ ಅವರು ಕಾರ್ಯಕ್ರಮದ ನಡೆಸಿಕೊಟ್ಟರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಆರು ತಂಡಗಳು ಭಾಗವಹಿಸಿದ್ದವು. ಡಾ. ನಾ.ಸೋಮೇಶ್ವರ ಅವರು ಆರು ತಂಡಗಳಿಗೆ ಪ್ರಶ್ನೆಗಳನ್ನು ಕೇಳಿದರು. ಸರಿ ಉತ್ತರ ನೀಡಿದ ತಂಡಕ್ಕೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು. ಆರು ತಂಡಗಳಿಗು ಸರಿಯಾದ ಉತ್ತರ ಗೊತ್ತಿಲ್ಲದಿದ್ದರೆ ಪ್ರೇಕ್ಷಕರಿಗೆ ಉತ್ತರ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಸರಿ ಉತ್ತರ ನೀಡಿದವರಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ರಸಪ್ರಶ್ನೆ ಕಾರ್ಯಕ್ರಮದ ಬಳಿಕ ಕರ್ನಾಟಕ ಸಂಘದ ತಿಂಗಳ ಅತಿಥಿ ಉಪನ್ಯಾಸ ನಡೆಯಿತು. ಡಾ. ನಾ.ಸೋಮೇಶ್ವರ ಅವರು ನಮ್ಮ ಹೊಟ್ಟೆಯಲ್ಲೊಂದು ಮಿದುಳು ವಿಷಯದ ಕುರಿತು ಮಾತನಾಡಿದರು. ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಅವರು ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ – ನಡು ರಸ್ತೆಯಲ್ಲೆ ನಿಂತ ಬಸ್ಸು, ಅದೇ ಮಾರ್ಗದಲ್ಲಿ ಬಂತು ಸಂಸದರ ಕಾರು, ಮುಂದೇನಾಯ್ತು? ಫೋಟೊ ವೈರಲ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200