ಕಾಟಾಚಾರದ ಭೇಟಿಯಿಂದ ಕೋಟ್ಯಂತರ ರೂಪಾಯಿ ವ್ಯರ್ಥ, ಸಿಎಂ ಶಿವಮೊಗ್ಗ ಭೇಟಿ ವಿರುದ್ಧ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | POLITICAL | 22 ಏಪ್ರಿಲ್ 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ 2 ದಿನಗಳ ಜಿಲ್ಲಾ ಭೇಟಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಇದೊಂದು ಕಾಟಾಚಾರದ ಭೇಟಿಯಾಗಿತ್ತು ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಮುಖಂಡ ತೀ.ನ.ಶ್ರೀನಿವಾಸ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆಲ್ಲ ಮುಖ್ಯಮಂತ್ರಿಗಳು ಯಾವುದೇ ಜಿಲ್ಲೆಗೆ ಭೇಟಿ ನೀಡಿದರೂ ಅಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರು. ಆಯಾ ಜಿಲ್ಲೆಗಳ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿ, ಸಾಧ್ಯವಾದಲ್ಲಿ ಅಲ್ಲಿಯೇ ಪರಿಹಾರ ಒದಗಿಸುತ್ತಿದ್ದರು ಎಂದರು.

ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಹ ಯಾವುದೇ ಕೆಲಸವನ್ನೂ ಮಾಡಲಿಲ್ಲ. ಕೇವಲ ಚುನಾವಣಾ ಸಿದ್ಧತೆಗಾಗಿ ಅವರು ಬಂದಂತಾಗಿತ್ತು. ಸಾರ್ವಜನಿಕರ ಕೋಟ್ಯಂತರ ರೂ. ತೆರಿಗೆ ಹಣವನ್ನು ವ್ಯರ್ಥಗೊಳಿಸಿದ್ದಾರೆ. ಅವರಿಗೆ ಜನರ ಸಮಸ್ಯೆ ಬಗ್ಗೆ ಚಿಂತೆಯೇ ಇಲ್ಲ ಎಂದು ಆರೋಪಿಸಿದರು.

ಜಿಲ್ಲೆಯ ಜನಪ್ರತಿನಿಧಿಗಳಿಗೂ ಜನರ ಸಮಸ್ಯೆ ಪರಿಹರಿಸುವ ಇಚ್ಛಾಶಕ್ತಿ ಇಲ್ಲ. ಮಲೆನಾಡ ಸಮಸ್ಯೆಗಳ ಕುರಿತು ಮೇ ಮೊದಲ ವಾರದಲ್ಲಿ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ ಈ ಹಿಂದೆಯೇ ಇದರ ಬಗ್ಗೆ ಸಭೆ ನಡೆದಿತ್ತು. ಸಭೆ ನಡೆದು ಹಲವು ತಿಂಗಳಾದರೂ ಸಭಾ ನಡವಳಿಕೆಯನ್ನೇ ಈವರೆಗೂ ಬರೆದಿಲ್ಲ ಎಂದರು.

ಅದೇ ರೀತಿ ಅರಣ್ಯ ಭೂಮಿ ಕುರಿತು ಸಂಸದರು 4 ತಿಂಗಳ ಹಿಂದೆಯೇ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತೀರ್ಮಾನಿಸಲಾಗಿತ್ತು. ಈವರೆಗೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಅಜೀಜ್, ಅಶೋಕ್, ರವಿ ಮತ್ತಿತರರು ಇದ್ದರು.

ಇದನ್ನೂ ಓದಿ | ‘ಬಿಜೆಪಿ ನಾಯಕರ ಆಸ್ತಿ ಎಷ್ಟಿತ್ತು? ಎಷ್ಟಾಗಿದೆ? ಶಿವಮೊಗ್ಗ ನಗರದಲ್ಲಿ ಯಾರೆಲ್ಲರ ಆಸ್ತಿ ಎಷ್ಟಿದೆ?’

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment