ಶಿವಮೊಗ್ಗ : ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ (seeds) ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್ಸಿಟಿ ರೈಲು, ಆಗಿದ್ದೇನು?
ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ 12 ಕೃಷಿಕರು ಮೂರು ಸಂಸ್ಥೆಗಳು ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು (seeds) ಪೂರೈಸಿವೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಚಾರ್ಮಿ ತಳಿಯ ಭತ್ತದ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿದ 40-50 ದಿನಗಳಾದರೂ ಸರಿಯಾದ ರೀತಿಯಲ್ಲಿ ಪೈರು ಬೆಳವಣಿಗೆಯಾಗಿರಲಿಲ್ಲ.
ಪೂರೈಕೆದಾರರನ್ನು ವಿಚಾರಿಸಿ, ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದವರು ಪರಿಶೀಲಿಸಿ ನೀಡಿದ ವರದಿಯನ್ನು ಆಧರಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದೆ. ಇಳುವರಿ ಕಡಿಮೆಯಾಗಿದೆ ಎಂದು ದೂರು ನೀಡಿದ್ದರು.
ದೂರುದಾರರ ಮತ್ತು ಎದುರುದಾರರ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದೆ ಎಂದು ಆಯೋಗ ಆದೇಶಿಸಿದೆ. ನಷ್ಟ ಅನುಭವಿಸಿದ 13 ಕೃಷಿಕರಿಗೆ 2023ರ ಜನವರಿ 1ರಿಂದ ಅನ್ವಯ ಆಗುವಂತೆ ಶೇ.8ರ ಬಡ್ಡಿ ಸಹಿತ ಒಟ್ಟು 4,43,724 ರೂ. ಪರಿಹಾರ ನೀಡಬೇಕು. ಆದೇಶವಾದ 45 ದಿನಗಳೊಳಗೆ ಪರಿಹಾರದ ಮೊತ್ತ ಪಾವತಿಸಬೇಕು.
ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್
ತಪ್ಪಿದ್ದಲ್ಲಿ ಈ ಮೊತ್ತಕ್ಕೆ ಶೇ. 10ರಂತೆ ಬಡ್ಡಿಯನ್ನು ಪೂರ ಹಣ ಪಾವತಿಸುವವರೆಗೆ ಹಾಗೂ 10 ಸಾವಿರ ರೂ.ಗಳನ್ನು ಮಾನಸಿಕ ಹಾನಿಗೆ ಮತ್ತು ರೂ. 5 ಸಾವಿರ ರೂ.ಗಳನ್ನು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ಎಂದು ಪ್ರತಿ ದೂರುದಾರರಿಗೆ ನೀಡಬೇಕೆಂದು ನಿರ್ದೇಶಿಸಿ, ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಆದೇಶಿಸಿದೆ.

LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






