ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ (seeds) ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ.
ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್ಸಿಟಿ ರೈಲು, ಆಗಿದ್ದೇನು?
ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ 12 ಕೃಷಿಕರು ಮೂರು ಸಂಸ್ಥೆಗಳು ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು (seeds) ಪೂರೈಸಿವೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಚಾರ್ಮಿ ತಳಿಯ ಭತ್ತದ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿದ 40-50 ದಿನಗಳಾದರೂ ಸರಿಯಾದ ರೀತಿಯಲ್ಲಿ ಪೈರು ಬೆಳವಣಿಗೆಯಾಗಿರಲಿಲ್ಲ.
ಪೂರೈಕೆದಾರರನ್ನು ವಿಚಾರಿಸಿ, ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದವರು ಪರಿಶೀಲಿಸಿ ನೀಡಿದ ವರದಿಯನ್ನು ಆಧರಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದೆ. ಇಳುವರಿ ಕಡಿಮೆಯಾಗಿದೆ ಎಂದು ದೂರು ನೀಡಿದ್ದರು.
ದೂರುದಾರರ ಮತ್ತು ಎದುರುದಾರರ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದೆ ಎಂದು ಆಯೋಗ ಆದೇಶಿಸಿದೆ. ನಷ್ಟ ಅನುಭವಿಸಿದ 13 ಕೃಷಿಕರಿಗೆ 2023ರ ಜನವರಿ 1ರಿಂದ ಅನ್ವಯ ಆಗುವಂತೆ ಶೇ.8ರ ಬಡ್ಡಿ ಸಹಿತ ಒಟ್ಟು 4,43,724 ರೂ. ಪರಿಹಾರ ನೀಡಬೇಕು. ಆದೇಶವಾದ 45 ದಿನಗಳೊಳಗೆ ಪರಿಹಾರದ ಮೊತ್ತ ಪಾವತಿಸಬೇಕು.
ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್
ತಪ್ಪಿದ್ದಲ್ಲಿ ಈ ಮೊತ್ತಕ್ಕೆ ಶೇ. 10ರಂತೆ ಬಡ್ಡಿಯನ್ನು ಪೂರ ಹಣ ಪಾವತಿಸುವವರೆಗೆ ಹಾಗೂ 10 ಸಾವಿರ ರೂ.ಗಳನ್ನು ಮಾನಸಿಕ ಹಾನಿಗೆ ಮತ್ತು ರೂ. 5 ಸಾವಿರ ರೂ.ಗಳನ್ನು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ಎಂದು ಪ್ರತಿ ದೂರುದಾರರಿಗೆ ನೀಡಬೇಕೆಂದು ನಿರ್ದೇಶಿಸಿ, ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಆದೇಶಿಸಿದೆ.

LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು






