ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿರ ಸಾವಿರ ಪಡಿತರ ಚೀಟಿ ರದ್ದು, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 23 SEPTEMBER 2024 : ಅರ್ಹರಲ್ಲದೆ ಇದ್ದರು ಪಡಿತರ ಚೀಟಿ (Ration Card) ಹೊಂದಿದ್ದವರ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕ ಅವಿನ್, ಕಾರ್ಡ್‌ ರದ್ಧತಿ ಕುರಿತು ಮಾಹಿತಿ ತಿಳಿಸಿದರು.

ಆಹಾರ ಇಲಾಖೆ ಅಧಿಕಾರಿ ಹೇಳಿದ್ದೇನು?

ಆರು ತಿಂಗಳು ಸತತವಾಗಿ ಪಡಿತರ ಪಡೆಯದ 8 ಸಾವಿರ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಇ-ಜನ್ಮ ಪೋರ್ಟಲ್ ಮಾಹಿತಿ ಆಧಾರದಲ್ಲಿ ಮರಣ ಹೊಂದಿದ 5 ಸಾವಿರ ಕಾರ್ಡುದಾರರ ಹೆಸರನ್ನು ತೆಗೆಯಲಾಗಿದೆ. 58 ಸರಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದು ಮಾಡಿ, ದಂಡ ವಿಧಿಸಲಾಗಿದೆ. ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ರೂ. ಮೀರಿರುವ 2,400 ಕಾರ್ಡ್‌ಗಳ ರದ್ದತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Kaveri IAS meeting in Shimoga

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅದ್ಧೂರಿ ಈದ್‌ ಮೆರವಣಿಗೆ, ಹೇಗಿತ್ತು? ಏನೇನಿತ್ತು?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment