SHIVAMOGGA LIVE NEWS | 28 SEPTEMBER 2023
SHIMOGA : ಗಾಂಧಿ ಬಜಾರ್ ಪ್ರವೇಶ ದ್ವಾರದಲ್ಲಿ ಉಗ್ರ ನರಸಿಂಹನ (Ugra Narasimha) ಅವತಾರದ ಪ್ರತಿಮೆ ಕಣ್ತುಂಬಿಕೊಳ್ಳಲು ಕಳೆದ ರಾತ್ರಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಜನರು ತಡರಾತ್ರಿವರೆಗು ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತಿದ್ದು ಉಗ್ರ ನರಸಿಂಹ ಕಲಾಕೃತಿಯನ್ನು ವೀಕ್ಷಿಸಿದರು.
ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
ನಡುರಾತ್ರಿವರೆಗು ಜನರು ಕುಟುಂಬ ಸಹಿತ ಗಾಂಧಿ ಬಜಾರ್ವರೆಗೆ ಬಂದಿದ್ದರು. ಸಾವಿರಾರು ಮಂದಿ ಮಹಾದ್ವಾರದ ಮುಂದೆ ನಿಂತು ಉಗ್ರ ನರಸಿಂಹ ಅವತಾರವನ್ನು ಕಣ್ತುಂಬಿಕೊಂಡರು. ಫೋಟೊ ತೆಗೆಸಿಕೊಂಡು, ಸೆಲ್ಫಿ ಕ್ಲಿಕ್ಕಿಸಿಕೊಂಡು ಜನರು ಖುಷಿಪಟ್ಟರು.
ಇದನ್ನೂ ಓದಿ – ಶಿವಮೊಗ್ಗದ ಉಗ್ರ ನರಸಿಂಹ ಫುಲ್ ವೈರಲ್, ಎಲ್ಲರ ಮೊಬೈಲ್ನಲ್ಲೂ ಉಗ್ರಂ ವೀರಂ
ದೊಡ್ಡ ಸಂಖ್ಯೆಯ ಜನ ಸೇರಿದ್ದರಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇನ್ನು, ಸುರಕ್ಷತೆ ದೃಷ್ಟಿಯಿಂದ ಪೊಲೀಸರನ್ನು ಕೂಡ ನಿಯೋಜಿಸಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200