ಜೈಲಿಗೆ ಹೋದರೂ ಪಾಠ ಕಲಿಯಲಿಲ್ಲ, ಬಿಡುಗಡೆಯಾಗಿ ಬಂದ ಮೇಲೆ ಮತ್ತೆ ಜೀವ ಬೆದರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS |  THREAT | 06 ಮೇ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೊಲೆ ಬೆದರಿಕೆ ಆರೋಪ ಸಂಬಂಧ ಕಂಬಿ ಎಣಿಸಿ ಬಂದ ಆರೋಪಿಗಳು ಮತ್ತೆ ಪ್ರಾಣ ಬೆದರಿಕೆ ಒಡ್ಡಿದ್ದಾರೆ. ಇವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಉಸ್ಮಾನ್ ಮತ್ತು ಅಬ್ಬಾಸ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭರತ್ ಮತ್ತು ಸುಮಂತ ಎಂಬುವವರನ್ನು ಸಾಯಿಸುತ್ತೇವೆ ಎಂದು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

ಏಪ್ರಿಲ್ 23ರಂದು ಭರತ್ ಎಂಬಾತನಿಗೆ ಉಸ್ಮಾನ್, ಅಬ್ಬಾಸ್ ಮತ್ತು ಸಲ್ಮಾನ್ ಎಂಬುವವರು ಜೀವ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿತ್ತು.

ಜೈಲಿನಿಂದ ಬಿಡುಗಡೆಯಾಗಿ ಬಂದ ಉಸ್ಮಾನ್ ಮತ್ತು ಅಬ್ಬಾಸ್ ಮತ್ತೆ ಜೀವ ಬೆದರಿಕೆ ಒಡ್ಡಿದ್ದಾರೆ. ಭರತನ ಸಂಬಂಧಿಯೊಬ್ಬರ ಮನೆ ಬಳಿಗೆ ಬಂದು ಕೊಲೆ ಬೆದರಿಕೆ ಒಡ್ಡಿದ್ದಾರೆ. ‘ಭರತ ಮತ್ತು ಸುಮಂತ ಎಲ್ಲಿದ್ದಾರೆ. ನಮ್ಮ ವಿರುದ್ಧ ಎಷ್ಟು ಕಂಪ್ಲೇಂಟ್ ಕೊಟ್ಟರೂ ಅವರನ್ನು ಬಿಡುವುದಿಲ್ಲ. ಅವರನ್ನು ಸಾಯಿಸುತ್ತೇವೆ’ ಎಂದು ಇಬ್ಬರು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಾಂಜಾ ಅಮಲಿನಲ್ಲಿದ್ದರ ವಿಚಾರಣೆ ವೇಳೆ ದೊಡ್ಡ ಸಂಚು ಬಯಲು, ಏನದು ಪ್ಲಾನ್?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment