‘ಪ್ರತಿ ದಿನ ಮಾಮೂಲಿ ಕೊಡದಿದ್ದರೆ ನಿನ್ನ ಹೆಂಡತಿ ಮಕ್ಕಳ ಸಹಿತ ಅಂಗಡಿಗೆ ಬೆಂಕಿ ಹಚ್ಚುತ್ತೇವೆ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪ್ರತಿ ದಿನ ತಮಗೆ ಮಾಮೂಲಿ ಕೊಡಬೇಕು. ಇಲ್ಲವಾದಲ್ಲಿ ಪೆಟ್ರೋಲ್ ಸುರಿದು ಹೆಂಡತಿ, ಮಕ್ಕಳ ಸಹಿತ ಅಂಗಡಿಯನ್ನು ದಹಿಸಿ ಬಿಡುತ್ತೇವೆ ಎಂದು ವ್ಯಾಪಾರಿಯೊಬ್ಬರಿಗೆ ಯುವಕರು ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ ವ್ಯಾಪಾರಿಯ ತಲೆಗೆ ಚಾಕುವಿನಿಂದ ಗಾಯಗೊಳಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಶಿವಮೊಗ್ಗದ ಮಿಳಘಟ್ಟ ಮುಖ್ಯರಸ್ತೆಯಲ್ಲಿನ ದಿನಸಿ ಅಂಗಡಿಯಲ್ಲಿ ಘಟನೆ ಸಂಭವಿಸಿದೆ. ಬೀಮಾನಂದ ಶೆಟ್ಟಿ ಎಂಬುವವರಿಗೆ ಬೆದರಿಕೆಯೊಡ್ಡಿ ಹಲ್ಲೆ ಮಾಡಲಾಗಿದೆ.

ಏನಿದು ಪ್ರಕರಣ?

ಷಹಬಾಜ್, ಸುಹಾನ್, ಮುನ್ನಾ ಮತ್ತಿತರರು ಬೀಮಾನಂದ ಶೆಟ್ಟಿ ಅವರ ದಿನಸಿ ಅಂಗಡಿಗೆ ರಾತ್ರಿ ಬಂದು ಬಾಳೆಹಣ್ಣು ಸೇರಿದಂತೆ ತಿಂಡಿ, ತಿನಿಸು ತಿಂದಿದ್ದಾರೆ. ಹಣ ಕೊಡುವಂತೆ ಬೀಮಾನಂದ ಶೆಟ್ಟಿ ಅವರು ಕೇಳಿದಾಗ ಆರೋಪಿಗಳು ನಿರಾಕರಿಸಿದ್ದಾರೆ. ಅಲ್ಲದೆ ತಾವು ಈ ಏರಿಯಾದ ರೌಡಿಗಳು ತಮಗೆ ಮಾಮೂಲಿ ಕೊಡಬೇಕು ಎಂದು ಬೆದರಿಸಿದ್ದಾರೆ.

ಇದನ್ನು ವಿರೋಧಿಸಿದ್ದಕ್ಕೆ ಬೀಮಾನಂದ ಶೆಟ್ಟಿ ಅವರತ್ತ ಚಾಕು ತೋರಿಸಿ, ತಲೆ ಭಾಗಕ್ಕೆ ಚಾಕುವಿನಿಂದ ಗಾಯಗೊಳಿಸಿದ್ದಾರೆ. ಅಲ್ಲದೆ ತಮಗೆ ಮಾಮೂಲಿ ಕೊಡದಿದ್ದರೆ ಪೆಟ್ರೋಲ್ ಸುರಿದು ಹೆಂಡತಿ, ಮಕ್ಕಳು ಸಹಿತ ಅಂಗಡಿಗೆ ಬೆಂಕಿ ಹೆಚ್ಚುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ.

ಬೀಮಾನಂದ ಶೆಟ್ಟಿ ಅವರು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ADVT JULY NANJAPPA HOSPITAL HOME LAB TESTING

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment