| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ಅಭಿವೃದ್ಧಿಯ ದಾರಿಯಲ್ಲಿ ಜ್ಞಾನದ ಬಗೆಗಿನ ಪ್ರಶ್ನೆ ಗಳನ್ನು ಮುಕ್ತವಾಗಿ ಚರ್ಚಿಸಲು ಫೆ.20ರಿಂದ ಮೂರು ದಿನ ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ‘ಸಮಾಜದಲ್ಲಿ ಜ್ಞಾನ’ ಸಮಾವೇಶ (conference) ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ .ಶರತ್ ಅನಂತಮೂರ್ತಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ ಜರ್ನಲ್ಸ್ ಆಫ್ ಡೈಲಾಗ್ಸ್ ಆನ್ ನಾಲೆಜ್ ಇನ್ ಸೊಸೈಟಿ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ನಡೆಯುತ್ತಿರುವ ಈ ಮಾದರಿಯ ಮೊದಲ ಸಮಾವೇಶವಾಗಿದೆ ಎಂದರು.
![]()
ವಿವಿಧ ಕ್ಷೇತ್ರಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮುಕ್ತವಾಗಿ ಚರ್ಚಿಸಲಿದ್ದಾರೆ. ತಂತ್ರಜ್ಞಾನ ದೇಶಕ್ಕೆ ಬರುವ ಮೊದಲು ಹಲವು ಜ್ಞಾನದ ಶಾಖೆಗಳಿದ್ದವು. ಆದರೆ, ಅವುಗಳನ್ನು ಇಂದು ಸೀಮಿತ ಮಾಡಲಾಗುತ್ತಿದೆ. ಸಮಾಜದ ಹಲವು ವಿಷಯಗಳನ್ನು ಪೂರ್ವಾಗ್ರಹ ಪೀಡಿತವಾಗಿ ಮಾತನಾಡುತ್ತಿದ್ದೇವೆಯೇ ಹೊರತು ಸತ್ಯದ ಬಗ್ಗೆ ಮಾತನಾಡುತ್ತಿಲ್ಲ. ಈ ವಿಷಯಗಳ ಬಗ್ಗೆ ಸಮಾನವಾಗಿ ಮಾತನಾಡುವವರ ನಡುವೆ ಸಂವಾದ ನಡೆಯಲಿದೆ
ಪ್ರೊ. ಶರತ್ ಅನಂತಮೂರ್ತಿ, ಕುವೆಂಪು ವಿವಿ ಕುಲಪತಿ
![]()
ಫೆ.20ರಂದು ಬೆಳಿಗ್ಗೆ 10ಕ್ಕೆ ಸಾಂಸ್ಕೃತಿಕ ಚಿಂತಕ ಪ್ರೊ.ಜಿ.ಎನ್.ದೇವಿ ಸಮಾವೇಶ ಉದ್ಘಾಟಿಸಲಿದ್ದಾರೆ. ವಾರಣಾಸಿ ವಿದ್ಯಾಶ್ರಮದ ಸುನಿಲ್ ಸಹಸ್ರಬುದ್ಧೆ ಆಶಯ ಭಾಷಣ ಮಾಡಲಿದ್ದಾರೆ.
ಪ್ರೊ. ರಾಮಪ್ರಸಾದ್, ಸಮಾವೇಶ ಸಂಯೋಜಕ
65 ವಿದ್ವಾಂಸರು, ವಿವಿಧ ರಾಜ್ಯಗಳ ಪ್ರೊಫೆಸರ್ಗಳು, ಕಲಾವಿದರು, ತತ್ವಜ್ಞಾನಿಗಳು ಸಮಾವೇಶದಲ್ಲಿ ಸಂವಾದ ನಡೆಸಲಿದ್ದಾರೆ. ಮೂರು ದಿನ ಒಟ್ಟು ಎಂಟು ಗೋಷ್ಠಿಗಳು ನಡೆಯಲಿವೆ. ಒಂದೇ ವಿಷಯದ ಬಗ್ಗೆ ವಿವಿಧ ಕ್ಷೇತ್ರಗಳ ತಜ್ಞರು ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. 120 ಜನ ಪ್ರತಿಕ್ರಿಯೆ ನೀಡಲಿದ್ದಾರೆ. ಇಲ್ಲಿ ಸಂಗ್ರಹವಾದ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುತ್ತದೆ. ರೈತರು, ತಳ ಸಮುದಾಯ, ಆದಿವಾಸಿಗಳ ಬಗ್ಗೆ ಅಧ್ಯಯನ ಮಾಡಿದವರು ಮುಕ್ತ ವೇದಿಕೆಯಲ್ಲಿ ವಿಚಾರ ಮಂಡಿಸಲಿದ್ದಾರೆ.
ಪ್ರೊ. ಮೇಟಿ ಮಲ್ಲಿಕಾರ್ಜುನ್, ಸಮಾವೇಶದ ಸಂಯೋಜಕ
ಕುವೆಂಪು ವಿವಿ ಕುಲಪತಿ ಎಲ್.ಎಲ್.ಮಂಜುನಾಥ್, ಸಹ್ಯಾದ್ರಿ ವಾಣಿಜ್ಯ ಕಾಲೇಜು ಪ್ರಾಂಶುಪಾಲ ಟಿ.ಅವಿನಾಶ್, ಕುವೆಂಪು ವಿವಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಎಂ.ಆರ್.ಸತ್ಯಪ್ರಕಾಶ್ ಸುದ್ದಿಗೋಷ್ಠಿಯಲ್ಲಿದ್ದರು.
![]()
ಇದನ್ನೂ ಓದಿ » ಬಂಗಾರಪ್ಪ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಗ್ರಂಥಾಲಯ, 5 ಲಕ್ಷದ ಚೆಕ್ ನೀಡಿದ ಸಚಿವ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()