ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಂಗಳೂರಿನ ಪಾದರಾಯನಪುರದಲ್ಲಿ ಹರಡಿದ್ದ ಕರೋನ ಸೋಂಕಿನ ಭೀತಿ ಶಿವಮೊಗ್ಗಕ್ಕೂ ವ್ಯಾಪಿಸಿದೆ. ಅಲ್ಲಿ ಬಂದೋಬಸ್ತ್ ಡ್ಯೂಟಿಗೆ ಹೋಗಿದ್ದವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದ ಮೂವರು ಪೊಲೀಸರಿಗೆ ಈಗ ಕರೋನ ಸೋಂಕು ಕಾಣಿಸಿಕೊಂಡಿದೆ.
ಮಂಗಳವಾರ ಪ್ರಕಟವಾದ ವರದಿಯಲ್ಲಿ ಪಿ5824, ಪಿ5825 ಮತ್ತು ಪಿ5826ಗೆ ಕರೋನ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಲಾಗಿತ್ತು. ಇದು ಶಿವಮೊಗ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬಂದೋಬಸ್ತ್ಗೆ ತೆರಳಿದ್ದವರ ಪ್ರಾಥಮಿಕ ಸಂಪರ್ಕ
ಬಂದೋಬಸ್ತ್ ಡ್ಯೂಟಿಗಾಗಿ ಶಿವಮೊಗ್ಗ KSRP ಪೊಲೀಸರು ಪಾದರಾಯನಪುರಕ್ಕೆ ತೆರಳಿದ್ದರು. ಇಲ್ಲಿಂದ ಹಿಂತಿರುಗಿದ ಕೆಲವರಿಗೆ ಕರೋನ ಸೋಂಕು ಇರುವುದು ದೃಢವಾಗಿತ್ತು. ಇದೇ ಕಾರಣಕ್ಕೆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಈ ಪೈಕಿ ಮೂವರಿಗೆ ಸೋಂಕು ಕಾಣಿಸಿಕೊಂಡಿದೆ.
ಸಂಪರ್ಕ ಪತ್ತೆ ಸಾಹಸ
ಬೆಂಗಳೂರಿನಿಂದ ಹಿಂತಿರುಗಿದ್ದ ಪೊಲೀಸರೊಂದಿಗೆ ಇತರೆ ಪೊಲೀಸರು ಸಂಪರ್ಕದಲ್ಲಿದ್ದರು. ಹಾಗಾಗಿ ಸೋಂಕು ಯಾರಿಂದ ತಗುಲಿದೆ ಅನ್ನುವು ಪತ್ತೆ ಹಚ್ಚುವುದು ಕಷ್ಟವಾಗಿದೆ. ಸದ್ಯ ಮೂವರಿಗೂ ಚಿಕಿತ್ಸೆ ಮುಂದುವರೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






