ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020
ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ಮಧ್ಯಾಹ್ನ ಚುನಾವಣೆ ನಡೆಯುವ ಸಾಧ್ಯತೆ ಇದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?
- ಚನ್ನವೀರಪ್ಪ | ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಮಂಜುನಾಥಗೌಡ ಅವರಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿದ್ದಾರೆ.
- ಜೆ.ಪಿ.ಯೋಗೇಶ್ | ಡಿಸಿಸಿ ಬ್ಯಾಂಕ್ ನಿರ್ದೇಶಕ. ಜಿಲ್ಲಾ ಪಂಚಾಯಿತಿಯ ಜೆಡಿಎಸ್ ಸದಸ್ಯರು.
- ಎಸ್.ಎಲ್.ಷಡಾಕ್ಷರಿ | ಡಿಸಿಸಿ ಬ್ಯಾಂಕ್ ನಿರ್ದೇಶಕರು.
ಮಧ್ಯಾಹ್ನ ನಡೆಯುತ್ತೆ ಚುನಾವಣೆ
ನಾಮಪತ್ರ ಹಿಂಪಡೆಯಲು ಕಾಲವಕಾಶ ನೀಡಲಾಗಿದೆ. ಮಧ್ಯಾಹ್ನ 1 ಗಂಟೆಯ ಬಳಿಕ ಅಗತ್ಯಬಿದ್ದರೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯ ವಿಡಿಯೋ ರಿಪೋರ್ಟ್
ಪ್ರತಿಷ್ಠೆಯಾದ ಅಧ್ಯಕ್ಷ ಸ್ಥಾನ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್, ಕಾಂಗ್ರೆಸ್ ಮೈತ್ರಿಕೂಟಕ್ಕೆ ಪ್ರತಿಷ್ಠೆಯಾಗಿದೆ. ಎಂ.ಬಿ.ಚನ್ನವೀರಪ್ಪ, ಬಿ.ಡಿ.ಭೂಕಾಂತ್, ಎನ್.ಹೆಚ್.ಶ್ರೀಪಾದ್ ರಾವ್, ಅಗಡಿ ಆಶೋಕ್ ಅವರು ಬಿಜೆಪಿ ಬೆಂಬಲಿತ ಸದಸ್ಯರು.
ಹೆಚ್.ಎಲ್.ಷಡಾಕ್ಷರಿ, ಜಿ.ಎನ್.ಸುಧೀರ್, ಎಸ್.ಪಿ.ದಿನೇಶ್, ಜೆ.ಪಿ.ಯೋಗೇಶ್, ಹೆಚ್.ಕೆ.ವೆಂಕಟೇಶ್, ಬಸವಾನಿ ವಿಜಯದೇವ್, ಕೆ.ಪಿ.ದುಗ್ಗಪ್ಪಗೌಡ, ಎಂ.ಎಂ.ಪರಮೇಶ್ ಅವರು ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]