ತೀರ್ಥಹಳ್ಳಿಯ ಇಬ್ಬರು, ಶಿವಮೊಗ್ಗದ ಒಬ್ಬ ವಿದ್ಯಾರ್ಥಿನಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 JANUARY 2023

SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

four-students-win-prizes-in-State-Level-competation

ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಶಿವಮೊಗ್ಗದ ಕಸ್ತೂರಿಬಾ ಪಿಯು ಕಾಲೇಜಿನ ಅರ್ಫಾ ರೀಮ್ ತಾಜ್ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ (competition) ಚಂದನ ಹೊಸೂರ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Shimoga Live 3 Million Views

ವಿವಿಧ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿರುವ ಈ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್, ಸ್ವೀಪ್ ನೋಡಲ್ ಅಧಿಕಾರಿ ನವೀನ್ ಕುಮಾರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನವೀದ್ ಅಹ್ಮದ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ, ಫಲಿತಾಂಶ ಪ್ರಕಟ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment