SHIVAMOGGA LIVE NEWS | 19 JANUARY 2023
SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಶಿವಮೊಗ್ಗದ ಕಸ್ತೂರಿಬಾ ಪಿಯು ಕಾಲೇಜಿನ ಅರ್ಫಾ ರೀಮ್ ತಾಜ್ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ (competition) ಚಂದನ ಹೊಸೂರ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿವಿಧ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿರುವ ಈ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್, ಸ್ವೀಪ್ ನೋಡಲ್ ಅಧಿಕಾರಿ ನವೀನ್ ಕುಮಾರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನವೀದ್ ಅಹ್ಮದ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ, ಫಲಿತಾಂಶ ಪ್ರಕಟ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



