SHIVAMOGGA LIVE NEWS | 19 JANUARY 2023
SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಶಿವಮೊಗ್ಗದ ಕಸ್ತೂರಿಬಾ ಪಿಯು ಕಾಲೇಜಿನ ಅರ್ಫಾ ರೀಮ್ ತಾಜ್ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ (competition) ಚಂದನ ಹೊಸೂರ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿವಿಧ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿರುವ ಈ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್, ಸ್ವೀಪ್ ನೋಡಲ್ ಅಧಿಕಾರಿ ನವೀನ್ ಕುಮಾರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನವೀದ್ ಅಹ್ಮದ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ, ಫಲಿತಾಂಶ ಪ್ರಕಟ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200