SHIVAMOGGA LIVE NEWS | 6 OCTOBER 2023
SHIMOGA : ದೆಹಲಿಯಲ್ಲಿ ಅ.9 ರಿಂದ 11 ರವರೆಗೆ ನಡೆಯಲಿರುವ ಇನ್ಸ್ಪೈರ್ ಅವಾರ್ಡ್ (INSPIRE AWARD) ರಾಷ್ಟ್ರಮಟ್ಟದ ಸ್ಪರ್ಧೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನಾ ಎಸ್. ಶೆಟ್ಟಿ, ತೀರ್ಥಹಳ್ಳಿಯ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಪಿ.ಅಪೇಕ್ಷಾ ಹಾಗೂ ಭದ್ರಾವತಿಯ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದವರು.
ವಿದ್ಯಾರ್ಥಿನಿಯರನ್ನು ಡಯಟ್ ಪ್ರಾಂಶುಪಾಲ ಬಿ.ಆರ್.ಬಸವರಾಜಪ್ಪ, ಇನ್ಸ್ಪೈರ್ ಅವಾರ್ಡ್ ಜಿಲ್ಲಾ ನೋಡಲ್ ಅಧಿಕಾರಿ ಎಂ.ನಾಗರಾಜ ಅಭಿನಂದಿಸಿದ್ದಾರೆ.
ಇದನ್ನೂ ಓದಿ – ಮತ್ತೊಂದು ಹೈಟೆಕ್ ಬಸ್ ಪರಿಚಯಿಸುತ್ತಿದೆ KSRTC, ಸದ್ಯದಲ್ಲೇ ರಸ್ತೆಗಿಳಿಯಲಿದೆ ‘ಪಲ್ಲಕ್ಕಿ’
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200