SHIVAMOGGA LIVE NEWS | 16 JULY 2024
SHIMOGA : ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ (Mantapa) ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಜನರು ನಿರಾಸೆಯಿಂದ ಹಿಂತಿರುಗುವಂತಾಗಿದೆ.
66 ಕ್ಯೂಸೆಕ್ ನೀರು
ಹಿನ್ನೀರು ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿಯ ಮೈದುಂಬಿ ಹರಿಯುತ್ತಿದೆ. ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಭರ್ತಿಯಾಗಿದೆ.
ಕಣ್ತುಂಬಿಕೊಳ್ಳಲು ಬಂದವರಿಗೆ ನಿರಾಸೆ
ಪ್ರತಿ ಮಳೆಗಾಲದಲ್ಲಿ ಜಲಾಶಯದಿಂದ ನೀರು ಹೊರ ಬಿಡುತ್ತಿದ್ದಂತೆ ಶಿವಮೊಗ್ಗದ ಜನರು ಮಂಟಪದತ್ತ ಕಣ್ಣು ಹಾಯಿಸುವುದು ಸಾಮಾನ್ಯ. ಜಗತ್ತಿನ ಯಾವುದೇ ಮೂಲೆಯಲ್ಲಿದ್ದರು ‘ಶಿವಮೊಗ್ಗದವರು ಮಂಟಪ ಮುಳುಗಿತಾ’ ಎಂಬ ಕುತೂಹಲದಿಂದ ಕೇಳುತ್ತಾರೆ. ಮಂಟಪ ಮುಳುಗಿದಾಗ ನಗರದ ವಿವಿಧೆಡೆಯಿಂದ ಜನರು ನದಿ ದಂಡೆಗೆ ಬರುವುದು ಸಾಮಾನ್ಯ. ಮಂಟಪದ ಬಳಿ ಪೂಜೆ ಸಲ್ಲಿಸಿ, ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿ ಪಡುತ್ತಾರೆ. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಮಂಟಪ ಮುಳುಗಿರುವುದನ್ನು ನೋಡಲು ಟಿಕೆಟ್ ಖರೀದಿಸಬೇಕಿದೆ.
ಗೇಟ್ ಬಳಿ ಬಂದು ಜನರ ಆಕ್ರೋಶ
ಅಯ್ಯಪ್ಪ ಸ್ವಾಮಿ ಶಾಲೆ ಸಮೀಪದಲ್ಲಿ ಮಂಟಪದ ಬಳಿ ತೆರಳಲು ಇರುವ ಗೇಟ್ ಬಂದ್ ಮಾಡಲಾಗಿದೆ. ಹಿಂದಿ ಭಾಷಿಕ ಸೆಕ್ಯೂರಿಟಿಯನ್ನು ಇಲ್ಲಿ ನಿಲ್ಲಿಸಲಾಗಿದ್ದು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಎದುರಿಗೆ ಕಾಂಪೌಂಡ್ ನಿರ್ಮಿಸಲಾಗಿದೆ. ಹಾಗಾಗಿ ಮಂಟಪ ನೋಡಲು ಸಾಧ್ಯವಿಲ್ಲ. ಬೆಕ್ಕಿನ ಕಲ್ಮಠದ ಸಮೀಪ ವಿದ್ಯಾರ್ಥಿನಿಯರ ಸರ್ಕಾರಿ ಹಾಸ್ಟೆಲ್ ಕಡೆಯಿಂದ ಒಳ ಹೋಗಲು ಅವಕಾಶವಿದೆ. ಆದರೆ ಹಣ ತೆತ್ತು ಟಿಕೆಟ್ ಖರೀದಿಸಿ ಒಳ ಹೋಗಬೇಕಿದೆ.
ಮಕ್ಕಳಿಗೆ ರಜೆ ಇದೆ. ಮಂಟಪ ಮುಳುಗಿದೆ ಅಂದರು. ಮೊಮ್ಮಕ್ಕಳನ್ನು ಕರೆದುಕೊಂಡು ಬಂದೆ. ಇಲ್ಲಿ ಗೇಟ್ ತೆಗೆಯುತ್ತಿಲ್ಲ. ಆ ಕಡೆಯಿಂದ ಬನ್ನಿ ಅಂತಿದ್ದಾರೆ. ಮಳೆ ಬರುತ್ತಿದೆ. ಈ ಮಕ್ಕಳನ್ನು ಹಿಡಿದುಕೊಂಡು ಇಲ್ಲಿಂದ ಆ ಗೇಟ್ವರೆಗೆ ನಡೆದುಕೊಂಡು ಹೋಗಲು ಆಗುತ್ತಾ? ಎರಡು ಹೆಜ್ಜೆ ಒಳಗೆ ಬಿಟ್ಟರೆ ನೋಡಕೊಂಡು ಹೋಗುತ್ತೇವೆ. ಪ್ರತಿ ವರ್ಷ ನೋಡುತ್ತಿದ್ದ ಮಂಟಪಕ್ಕೆ ಈಗ ಟಿಕೆಟ್ ತೆಗೆದುಕೊಂಡು ನೋಡಿ ಅಂತಿರೋದು ಸರಿನಾ?ಲಕ್ಷ್ಮಮ್ಮ, ಶಿವಮೊಗ್ಗದ ನಿವಾಸಿ
ಗೇಟ್ನಲ್ಲಿಯೇ ನಿಂತು ಜನರು ಮಂಟಪ ವೀಕ್ಷಿಸಲಾಗದೆ ಸ್ಮಾರ್ಟ್ ಸಿಟಿ, ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕಿ ಹಿಂತಿರುಗುತ್ತಿದ್ದಾರೆ.
ಮಂಟಪ ನೋಡಲು ಅವಕಾಶ ಕಲ್ಪಿಸಬೇಕಿತ್ತು
ಮಳೆಗಾಲದಲ್ಲಿ ಒಂದೆರಡು ಬಾರಿ ಮಂಟಪ ಮುಳುಗಬಹುದು. ಮೊದಲ ಬಾರಿ ಮುಳುಗಿದಾಗ ಜನರು ಕುತೂಹಲದಿಂದ ಮಂಟಪದ ಬಳಿ ಬರುತ್ತಾರೆ. ತುಂಗೆಗೆ ಪೂಜೆ ಸಲ್ಲಿಸುತ್ತಾರೆ. ಕನಿಷ್ಠ ಮಂಟಪ ನೋಡಲು ಅವಕಾಶ ನೀಡಬೇಕಿತ್ತು ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ ⇓
ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ ಮಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಇಲ್ಲಿದೆ ಡಿಟೇಲ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200