SHIVAMOGGA LIVE NEWS | 18 APRIL 2024
RAILWAY NEWS : ಭದ್ರಾವತಿ ರೈಲ್ವೆ ಅಂಡರ್ ಪಾಸ್ನಲ್ಲಿ ಲಾರಿ ಅಪಘಾತ ಸಂಭವಿಸಿ ಹಳಿಗಳು ಏರುಪೇರಾಗಿತ್ತು. ಹಾಗಾಗಿ ಎರಡು ರೈಲುಗಳು ಸುಮಾರು ಎರಡು ಗಂಟೆ ತಡವಾಗಿ ಸಂಚಾರ ಆರಂಭಸಿವೆ.
ಅಪಘಾತ ಸಂಭವಿಸಿದ್ದು ಹೇಗೆ?
ಭದ್ರಾವತಿ ಪಟ್ಟಣದ ರೈಲ್ವೆ ಅಂಡರ್ಪಾಸ್ ಮುಂದೆ ನಿಗದಿಗಿಂತಲೂ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್ ಹಾಕಲಾಗಿದೆ. ಕಳೆದ ರಾತ್ರಿ ಈ ಬ್ಯಾರಿಕೇಡ್ಗೆ ಲಾರಿ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್ ಮುರಿದು ರೈಲ್ವೆ ಹಳಿಗೆ ತಾಗಿತ್ತು. ಇದರಿಂದ ಹಳಿಗಳು ಎರುಪೇರಾಗಿ ತಾಂತ್ರಿಕ ದೋಷ ಉಂಟಾಗಿತ್ತು. ಕೂಡಲೆ ರೈಲ್ವೆ ಸಿಬ್ಬಂದಿ ಹಳಿ ರಿಪೇರಿ ಕಾಮಗಾರಿ ಆರಂಭಿಸಿದ್ದರು. ಇದರಿಂದ ಶಿವಮೊಗ್ಗ – ಭದ್ರಾವತಿ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.
ಕಾದು ಕಾದು ಹೈರಾಣಾದ ಪ್ರಯಾಣಿಕರು
ಹಳಿ ರಿಪೇರಿ ಕಾರ್ಯದ ಹಿನ್ನೆಲೆ ಎರಡು ರೈಲುಗಳು ವಿಳಂಬವಾಗಿ ಸಂಚರಿಸುತ್ತಿವೆ. ಬೆಳಗ್ಗೆ 4.45ಕ್ಕೆ ಶಿವಮೊಗ್ಗ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ ರೈಲು ಬೆಳಗ್ಗೆ 6.45ಕ್ಕೆ ತಲುಪಿದೆ. ಅಲ್ಲಿಯವರೆಗೂ ಈ ರೈಲು ಭದ್ರಾವತಿ ನಿಲ್ದಾಣದಲ್ಲಿ ನಿಂತಿತ್ತು.
ಇನ್ನು, ಶಿವಮೊಗ್ಗದಿಂದ ಬೆಳಗ್ಗೆ 5.15ಕ್ಕೆ ಹೊರಡಬೇಕಿದ್ದ ಬೆಂಗಳೂರು ಜನಶತಾಬ್ದಿ ರೈಲು ಸುಮಾರು ಬೆಳಗ್ಗೆ 6.355ಕ್ಕೆ ಹೊರಟಿದೆ. ವಿಳಂಬಕ್ಕೆ ಕಾರಣ ಗೊತ್ತಾಗದೆ ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.
ಇದನ್ನೂ ಓದಿ – ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ ಸೇರಿ ಎರಡು ರೈಲುಗಳ ಸಮಯ ಮರು ಹೊಂದಾಣಿಕೆ, ಕಾರಣವೇನು? ಯಾವ್ಯಾವ ದಿನ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200