ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MAY 2021
ಜನ ಗುಂಪುಗೂಡುವುದನ್ನು ನಿಯಂತ್ರಿಸುವ ಸಲುವಾಗಿ ಮಾರುಕಟ್ಟೆಗಳನ್ನು ನಿಷೇಧಿಸಿ, ಮನೆ ಬಳಿಗೆ ತರಕಾರಿ, ಹಣ್ಣು ಮಾರಾಟಕ್ಕೆ ತಳ್ಳುಗಾಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಿದ್ದೂ ಶಿವಮೊಗ್ಗ ನಗರದಲ್ಲಿ ಇವತ್ತು ಜನ ತರಕಾರಿ, ಹಣ್ಣು ಖರೀದಿಗೆ ಗುಂಪುಗೂಡುವುದು ತಪ್ಪಲಿಲ್ಲ.
ನಗರದ ಪ್ರಮುಖ ರಸ್ತೆಗಳಲ್ಲಿ ಇವತ್ತು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಬಿ.ಹೆಚ್.ರಸ್ತೆಯಲ್ಲಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಜೈಲ್ ರಸ್ತೆಯಲ್ಲಿ ಭಾರಿ ಜನ ಸಂದಣಿ ಇತ್ತು. ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಹಲವು ಕಾರಣಕ್ಕೆ ಜನರು ರಸ್ತೆಗಿಳಿದಿದ್ದರು. ಕೆಲವರು ಮಾಸ್ಕ್ ಮರೆತಿದ್ದರು. ಸಾಮಾಜಿಕ ಅಂತರವಂತೂ ಇರಲಿಲ್ಲ.
ಹೊಳೆ ಬಸ್ ನಿಲ್ದಾಣ ಬಳಿ*ಶಿವಮೊಗ್ಗ ಸಿಟಿಯಲ್ಲಿ ಇವತ್ತು ಫುಲ್ ಟ್ರಾಫಿಕ್.. ಟ್ರಾಫಿಕ್..* ಕಚೇರಿ, ಕಟ್ಟಡ ನಿರ್ಮಾಣಕ್ಕೆ ಜನ
ಬ್ಯಾಂಕುಗಳು, ಕೆಲವು ಕಚೇರಿಗಳು, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸರ್ಕಾರ ವಿನಾಯಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ತೆರಳುವವರು ಹೆಚ್ಚಿನ ಸಂಖ್ಯೆಯಲ್ಲಿ ಹೊರ ಬಂದಿದ್ದರಿಂದ ರಸ್ತೆಯಲ್ಲಿ ಜನ ಸಂದಣಿ ಇತ್ತು. ರಿಲ್ಯಾಕ್ಸೇಷನ್ ಅವಧಿ ಮುಗಿಯುತ್ತಿದ್ದಂತೆ ಕರ್ಫ್ಯೂ ಜಾರಿಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ತುರ್ತು ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
