ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
SHIMOGA : ಪ್ರಮುಖ ರಸ್ತೆಗಳ ಬದಿಯಲ್ಲಿ ಭಾರಿ ವಾಹನಗಳನ್ನು (heavy vehicles ) ನಿಲ್ಲಿಸಿದ್ದವರಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದ ವಿವಿಧೆಡೆ ದಿಢೀರ್ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು, ಎಲ್ಲೆಂದರಲ್ಲಿ ನಿಲ್ಲಿಸಿದ್ದ ಲಾರಿ, ಬಸ್ಸುಗಳನ್ನು ತೆರವು ಮಾಡಿಸಿದರು. ಅಲ್ಲದೆ ಮೋಟರ್ ವಾಹನ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.
ಸಂಚಾರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಾಗರ ರಸ್ತೆ, ಹೊನ್ನಾಳಿ ರಸ್ತೆ, ತೀರ್ಥಹಳ್ಳಿ ರೋಡ್, ಸವಳಂಗ ರಸ್ತೆ ಮತ್ತು ಸಿಟಿಯ ಪ್ರಮುಖ ರಸ್ತೆಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಲಾಯಿತು.

ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಭಾರಿ ವಾಹನಗಳ ಪಾರ್ಕಿಂಗ್ ಮಾಡುವುದರಿಂದ ಅಪಘಾತ ಸಂಭವಿಸಲಿದೆ. ಭಾರಿ ಮಳೆ ಹಿನ್ನೆಲೆ ಅಪಘಾತಗಳ ಸಾಧ್ಯತೆ ಹೆಚ್ಚು. ಆದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಭಾರಿ ವಾಹನಗಳನ್ನು ತೆರವು ಮಾಡಿಸಲಾಯಿತು.
ಇದನ್ನೂ ಓದಿ ⇓
ಸಿಟಿ ಸೆಂಟರ್ನಿಂದ ಹೊರ ಬಂದ ಹೊನ್ನಾಳಿ ವ್ಯಕ್ತಿಗೆ ಕಾದಿತ್ತು ಆಘಾತ | ಭದ್ರಾವತಿಯಲ್ಲಿ ಸಿಕ್ಕಿಬಿದ್ದ ವೈರ್ ವಂಚಕ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





