ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JANUARY 2023
ಶಿವಮೊಗ್ಗ : ಪ್ರಮುಖ ರಸ್ತೆಗಳಲ್ಲಿ ಭಾರಿ ವಾಹನ ಸಂಚಾರ (traffic) ನಿರ್ಬಂಧ, ತಂಗುದಾಣಗಳ ಬಳಿ ಮಾತ್ರ ಸಿಟಿ ಬಸ್ ನಿಲುಗಡೆ ನಿಯಮ ಇಂದಿನಿಂದ ಜಾರಿಗೆ ಬಂದಿದೆ. ಬೆಳಗ್ಗೆಯಿಂದಲೆ ಸಂಚಾರಿ ಪೊಲೀಸರು ನಗರದಾದ್ಯಂತ ಈ ನಿಯಮ ಕಟ್ಟುನಿಟ್ಟು ಜಾರಿಗೊಳಿಸಿದ್ದಾರೆ.
ಭಾರಿ ವಾಹನ ಸಂಚಾರ ನಿರ್ಬಂಧ
ವಿದ್ಯಾರ್ಥಿಗಳು ಶಾಲೆ, ಕಾಲೇಜು, ನೌಕರರು ಕಚೇರಿಗೆ ತೆರಳುವ ಮತ್ತು ಮನೆಗೆ ಮರಳುವ ಸಮಯದಲ್ಲಿ ನಗರದಲ್ಲಿ ಸಂಚಾರ (traffic) ದಟ್ಟಣೆ ಹೆಚ್ಚು. ಈ ಹಿನ್ನೆಲೆ ನಗರದ ಪ್ರಮುಖ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಪ್ರಮುಖ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ಹಲವು ರಸ್ತೆಗಳಲ್ಲಿ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದ 19 ರಸ್ತೆಯಲ್ಲಿ ಸರಕು ಸಾಗಣೆ, ಭಾರಿ ವಾಹನ ಪ್ರವೇಶ ನಿಷೇಧ, ಸಂಚಾರಕ್ಕೆ ಟೈಮ್ ಫಿಕ್ಸ್
ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದ ನಗರದಲ್ಲಿ ನಿಯಮ ಜಾರಿಗೆ ಬಂದಿದೆ. ಬೆಳಗ್ಗೆಯಿಂದಲೆ ಪೊಲೀಸರು ಭಾರಿ ವಾಹನಗಳು ನಗರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಹಲವು ಕಡೆ ಬ್ಯಾರಿಕೇಡ್ ಹಾಕಿ, ಜಾಗೃತಿಗಾಗಿ ಫ್ಲೆಕ್ಸ್ ಅಳವಡಿಸಿದ್ದಾರೆ.

ಸಿಟಿ ಬಸ್ಸುಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್
ಇನ್ನು, ಜನ ಕೈ ತೋರಿಸಿದ ಕಡೆಯಲ್ಲೆಲ್ಲ ಸಿಟಿ ಬಸ್ಸುಗಳ ನಿಲುಗಡೆ ಮಾಡಲಾಗುತ್ತಿದೆ ಎಂಬ ಆರೋಪವಿತ್ತು. ಈ ಹಿನ್ನೆಲೆ ನಗರದಾದ್ಯಂತ ಸಿಟಿ ಬಸ್ಸುಗಳ ನಿಲುಗಡೆಯನ್ನು ಗುರುತಿಸಿ, ಅಧಿಸೂಚನೆ ಹೊರಡಿಸಲಾಗಿತ್ತು. ಇವತ್ತಿನಿಂದ ಈ ನಿಯಮ ಕೂಡ ಜಾರಿಗೆ ಬಂದಿದೆ. ಬೆಳಗ್ಗೆಯಿಂದಲೆ ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು, ನಿಗದಿತ ನಿಲ್ದಾಣ ಹೊರತು ಬೇರೆಡೆ ಬಸ್ಸುಗಳನ್ನ ನಿಲ್ಲಿಸುವವರಿಗೆ ದಂಡ ಹಾಕುತ್ತಿದ್ದಾರೆ.
ಇದನ್ನೂ ಓದಿ – ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಿಸುವಂತಿಲ್ಲ, ಶಿವಮೊಗ್ಗದಲ್ಲಿ 117 ಬಸ್ ಸ್ಟಾಪ್ ಗುರುತಿಸಿ ಅಧಿಸೂಚನೆ ಪ್ರಕಟ
ಪ್ರಯಾಣಿಕರಿಗೆ ಬಸ್ ಸಿಬ್ಬಂದಿ ಜಾಗೃತಿ
ಇತ್ತ ಸಿಟಿ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಕಂಡಕ್ಟರ್ ಗಳು, ಬಸ್ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಇನ್ಮುಂದೆ ನಿಗದಿತ ನಿಲ್ದಾಣಗಳಲ್ಲಿ ಮಾತ್ರ ಬಸ್ಸುಗಳನ್ನು ನಿಲ್ಲಿಸಲಾಗುತ್ತದೆ. ಎಲ್ಲೆಂದರಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದಿಲ್ಲ, ಇಳಿಸುವುದಿಲ್ಲ ಎಂದು ಮನವರಿಕೆ ಮಾಡಿಕೊಡುತ್ತಿದ್ದಾರೆ.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – OUR WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















