ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ವಿಭಿನ್ನ ಜಾಗೃತಿ ಪ್ರದರ್ಶನ, ರಾಜ್ಯದಲ್ಲಿ ಇದೇ ಮೊದಲು ಇಂತಹ ಪ್ರಯತ್ನ, ಏನೇನಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 31 JANUARY 2024

ಶಿವಮೊಗ್ಗ : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನವನ್ನು (exhibition) ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು, ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಲು ಈ ಪ್ರಯತ್ನ ಮಾಡಲಾಗಿದೆ.

ಕೋಟೆ ಪೊಲೀಸ್‌ ಠಾಣೆ ಸಮೀಪದಲ್ಲಿರುವ ಪೊಲೀಸ್‌ ಗೆಸ್ಟ್‌ ಹೌಸ್‌ ಆವರಣದಲ್ಲಿ ಜಿಲ್ಲಾ ಪೊಲೀಸ್‌, ಶಿವಮೊಗ್ಗ ನಗರ ಸಂಚಾರ ಪೊಲೀಸ್‌ ವತಿಯಿಂದ ರಸ್ತೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನ ಆಯೋಜಿಸಲಾಗಿದೆ.  ಜ.31 ಮತ್ತು ಫೆ.1ರಂದು ಪ್ರದರ್ಶನ ಇರಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.

Shimoga Traffic police exhibition

ಪ್ರದರ್ಶನಕ್ಕೆ ಎಸ್‌ಪಿ ಚಾಲನೆ

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಇವತ್ತು ರಸ್ತೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನಕ್ಕೆ ಚಾಲನೆ ನೀಡಿದರು.

Shimoga Traffic police

ನಮ್ಮ ಸುರಕ್ಷತೆಗಾಗಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಈಚೆಗೆ ಭದ್ರಾವತಿ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮೆಡಿಕಲ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಬದುಕುಳಿದರು. ಸೀಟ್ ಬೆಲ್ಟ್ ಹಾಕದೆ ಇದ್ದಿದ್ದರಿಂದ ಆಕೆ ಪ್ರಾಣ ಕಳೆದುಕೊಂಡಿದ್ದಾರೆ. ಬೈಕ್ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಇದ್ದರೆ ಸಾವನ್ನಪ್ಪುತ್ತಾರೆ. ಬೈಕ್‌ನಿಂದ ಬಿದ್ದಾಗ ತಲೆಗೆ ಹೆಚ್ಚು ಗಾಯ ಆಗಲಿದೆ.

ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

ಪ್ರದರ್ಶನದಲ್ಲಿ ಏನೇನೆಲ್ಲ ಇದೆ?

Shimoga Traffic police exhibition

ಜಾಗೃತಿ ಪ್ರದರ್ಶನದ ಪ್ರವೇಶ ದ್ವಾರದಲ್ಲಿ ಜೀಬ್ರಾ ಕ್ರಾಸಿಂಗ್‌, ಯಾವ ಸಂದರ್ಭದಲ್ಲಿ ವಾಹನಗಳ ಓವರ್‌ ಟೇಕ್‌ ಮಾಡಬೇಕು, ಯಾವಾಗ ಓವರ್‌ ಟೇಕ್‌ ಮಾಡಬಾರದು ಎಂದು ರಸ್ತೆ ಮೇಲೆ ವಿವರಣೆ ಹಾಕಲಾಗಿದೆ. ಅಕ್ಕಪಕ್ಕದ ಮರಗಳ ಮೇಲೆ ಜಾಗೃತಿ ಫಲಕಗಳನ್ನು ಅಳವಡಿಸಲಾಗಿದೆ.

ಅಪಘಾತದ ಸನ್ನಿವೇಶ ಸೃಷ್ಟಿ

Shimoga Traffic police exhibition

ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಜನರಿಗೆ ಮನದಟ್ಟು ಮಾಡಲು ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾದಂತಹ ಸನ್ನಿವೇಶ ಸ್ಥಾಪಿಸಲಾಗಿದೆ.

ಬೈಕುಗಳ ಮನದಾಳದ ಮಾತು

Shimoga Traffic police exhibition

ಸಂಚಾರ ನಿಯಮ ಪಾಲಿಸುವಂತೆ ಬೈಕುಗಳೇ ತಮ್ಮ ಮನದಾಳದ ಮಾತನ್ನಾಡುವ ಸನ್ನಿವೇಶ ನಿರ್ಮಿಸಲಾಗಿದೆ. ಬೈಕ್‌ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡಬಾರದು, ಮದ್ಯ ಸೇವಿಸಿ ವಾಹನ ಚಲಾಯಿಸಬಾರದು ಎಂಬುದನ್ನು ಬೈಕುಗಳೇ ಸವಾರರಿಗೆ ತಿಳಿಸುವಂತೆ ಫ್ಲೇಕರ್‌ ಅಳವಡಿಸಲಾಗಿದೆ.

ಉಪಕರಣಗಳ ಪ್ರದರ್ಶನ

Shimoga Traffic police exhibition

ಟ್ರಾಫಿಕ್‌ ಪೊಲೀಸರು ಸಂಚಾರ ನಿಯಂತ್ರಣದ ಸಂದರ್ಭ ಉಪಯೋಗಿಸುವ ಉಪಕರಣಗಳನ್ನು ಪ್ರದರ್ಶಿಸಲಾಗಿದೆ. ಬ್ಯಾರಿಕೇಡ್‌, ರಾಡಾರ್‌ ಸ್ಪೀಡ್‌ ಗನ್‌, ಬಾಡಿ ಕ್ಯಾಮರಾ, ಎಲ್‌ಇಡಿ ಸೋಲಾರ್‌ ಬ್ಲಿಂಕರ್‌ ಲೈಟ್ಸ್‌, ಟ್ರಾಫಿಕ್‌ ಬೋಲಾರ್ಡ್‌, ಮೀಡಿಯನ್‌ ಮೇಕರ್‌ ಸೇರಿದಂತೆ ಹಲವು ಉಪಕರಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ.

ಸ್ಮಾರ್ಟ್‌ ಕ್ಯಾಮರಾ ವಿಡಿಯೋಗಳು

Shimoga Traffic police exhibition

ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ನಗರದ ವಿವಿದೆಡೆ ಸ್ಮಾರ್ಟ್‌ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇವುಗಳಲ್ಲಿ ಸೆರೆಯಾದ ವಿವಿಧ ಸಂಚಾರ ನಿಯಮ ಉಲ್ಲಂಘನೆಯ ವಿಡಿಯೋ, ಫೋಟೊಗಳನ್ನು ಪ್ರದರ್ಶಿಸಲಾಗಿದೆ.

ಅಪಘಾತದ ತೀವ್ರತೆ ಮನದಟ್ಟು

ಅಪಘಾತದ ತೀವ್ರತೆಯನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಲು ಅಪಘಾತಕ್ಕೀಡಾದ ವಾಹನಗಳನ್ನು ಪ್ರದರ್ಶಿಸಲಾಗಿದೆ.

Shimoga Traffic police exhibition

ಇನ್ನು, ಆರ್‌ಟಿಒದಿಂದ ಸುರಕ್ಷತಾ ಸಾಧನಗಳ ಪರಿಚಯ, ಇನ್ಷುರೆನ್ಸ್‌ ಕಂಪನಿಯ ಸ್ಟಾಲ್‌ಗಳು ಇಲ್ಲಿವೆ. ಸಂಚಾರ ನಿಯಮಗಳು ಮತ್ತು ಅವುಗಳನ್ನು ಪಾಲಿಸುವ ಅಗತ್ಯತೆ ಕುರಿತು ಜಾಗೃತಿ ಮೂಡಿಸುವ ಸೆಲ್ಫಿ ಪಾಯಿಂಟ್‌ಗಳು ಇಲ್ಲಿವೆ.

Shimoga Traffic police exhibition

ಮೊದಲ ದಿನವೇ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಜೀವ ರಕ್ಷಕ ಪ್ರಶಸ್ತಿ

Shimoga Traffic police exhibition

ಅಪಘಾತಗಳ ಸಂದರ್ಭ ತುರ್ತಾಗಿ ನೆರವು ನೀಡಿದ ಐವರನ್ನು ಗುರುತಿಸಿ ಜೀವ ರಕ್ಷಕ ಪ್ರಶಸ್ತಿ ನೀಡಲಾಯಿತು. ಶ್ರೀಕಾಂತ್‌, ಚಂದನ್‌, ಆಶೀಶ್‌, ಸಂತೋಷ್‌, ಪ್ರವೀಣ್‌ ಕುಮಾರ್‌ ಅವರಿಗೆ ಪ್ರಶಸ್ತಿ ನೀಡಲಾಯಿತು. ಇನ್ನು, ರಸ್ತೆ ಸುರಕ್ಷತಾ ಸಪ್ತಾಹದ ಸಂದರ್ಭ ವಿವಿಧ ಶಾಲೆಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Shimoga Traffic police exhibition

ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್‌ ಕುಮಾರ್‌ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಸಂಜೀವ್‌ ಕುಮಾರ್‌, ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌, ಪಿಎಸ್‌ಐಗಳಾದ ಭಾರತಿ, ತಿರುಮಲೇಶ್‌, ನವೀನ್‌ ಕುಮಾರ್‌ ಮಠಪತಿ, ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಗುಡ್‌ ನ್ಯೂಸ್‌ ನೀಡಿದ ಶಿಮುಲ್‌

Exhibition

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 31, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment