ದುರ್ಗಿಗುಡಿಯ ಕಿರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ, ಫೇಸ್ ಬುಕ್ಕಲ್ಲಿ ಆಕ್ರೋಶ, ಏನಿದು ಸಮಸ್ಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | TRAFFIC | 13 ಮೇ 2022

ಒನ್ ವೇ ರಸ್ತೆಯಲ್ಲಿ ಟೂ ವೇ ಸಂಚಾರ. ವಾಹನ ಸವಾರರಿಗೆ ತಪ್ಪದ ಕಿರಿಕಿರಿ. ಸಂಚಾರಿ ಪೊಲೀಸರ ನಿರ್ಲಕ್ಷ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೇಸರ.

ಶಿವಮೊಗ್ಗದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ವಾಹನಗಳಿಗೆ ಒನ್ ವೇ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಸಂಬಂಧ ಪೊಲೀಸ್ ಇಲಾಖೆ ನಿಯಮವನ್ನು ಹೊರಡಿಸಿದ್ದು, ಬ್ಯಾನರ್ ಕೂಡ ಅಳವಡಿಸಲಾಗಿದೆ. ಆದರೆ ಒನ್ ವೇ ನಿಯಮ ಪಾಲನೆ ಆಗುತ್ತಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಚರ್ಚೆಯಾಗುತ್ತಿದೆ.

ಕಿರು ರಸ್ತೆಯಲ್ಲಿ ಕಿರಿಕಿರಿ

ದುರ್ಗಿಗುಡಿ ಮುಖ್ಯ ರಸ್ತೆ ಅತ್ಯಂತ ಕಿರಿದಾಗಿದೆ. ಆದರೆ ವಾಹನ ದಟ್ಟಣೆ ಹೆಚ್ಚಿದೆ. ಅಂಗಡಿಗಳು, ಕಚೇರಿಗಳು ಹೆಚ್ಚಿರುವುದು ಮತ್ತು ಪ್ರಮುಖ ರಸ್ತೆಗೆ ಸಂಪರ್ಕ ರಸ್ತೆ ಆಗಿರುವುದರಿಂದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚು. ಈ ಕಿರು ರಸ್ತೆಯಲ್ಲಿ ವಾಹನ ಸವಾರರು ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ.

ಒನ್ ವೇ ಬದಲು ಟೂ ವೇ

ವಾಹನ ದಟ್ಟಣೆ ನಿಯಂತ್ರಣ ಮಾಡುವ ಸಲುವಾಗಿ ದುರ್ಗಿಗುಡಿ ರಸ್ತೆಯಲ್ಲಿ ಒನ್ ವೇ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನೆಹರೂ ರಸ್ತೆಯಿಂದ ದುರ್ಗಿಗುಡಿ ಮೂಲಕ ಜೈಲ್ ಸರ್ಕಲ್’ಗೆ ಬರಲು ಅವಕಾಶವಿದೆ. ಆದರೆ ಜೈಲ್ ಸರ್ಕಲ್ ಕಡೆಯಿಂದ ನೆಹರೂ ರಸ್ತೆ ಕಡೆಗೆ ಹೋಗುವ ವಾಹನಗಳು ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ತೆರಳುವಂತಿಲ್ಲ. ಇದೆ ಕಾರಣಕ್ಕೆ ದುರ್ಗಿಗುಡಿ ಮುಖ್ಯರಸ್ತೆ ಮುಂಭಾಗ ಬ್ಯಾರಿಕೇಡ್ ಅಳವಡಿಸಲಾಗಿದೆ. ಒನ್ ವೇ ಎಂದು ಬ್ಯಾನರ್ ಕೂಡ ಹಾಕಲಾಗಿದೆ. ಆದರೆ ಇದಕ್ಕೆ ಕ್ಯಾರೆ ಅನ್ನದ ವಾಹನ ಸವಾರರು ಒನ್ ವೇ ಬದಲು ಟು ವೇ ಸಂಚಾರ ನಡೆಸುತ್ತಿದ್ದಾರೆ.

Shimoga Nanjappa Hospital

ಸ್ಮಾರ್ಟ್ ಸಿಟಿಯಿಂದ ಸ್ವಲ್ಪ ರಿಲ್ಯಾಕ್ಸ್

ಜೈಲ್ ರಸ್ತೆಯಿಂದ ಬರುವ ವಾಹನಗಳು ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ತೆರಳುವಂತಿಲ್ಲ. ಬದಲಾಗಿ ಪಕ್ಕದ LLR ರಸ್ತೆ ಮೂಲಕ ಗೋಪಿ ಸರ್ಕಲ್ ಮತ್ತು ನೆಹರೂ ರಸ್ತೆ ತಲುಪಬೇಕು. ಆದರೆ LLR ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿತ್ತು. ಇದೆ ಕಾರಣಕ್ಕೆ ಪೊಲೀಸರು ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಒನ್ ವೇ ಸಂಚಾರಕ್ಕೆ ಸ್ವಲ್ಪ ರಿಲ್ಯಾಕ್ಸ್ ನೀಡಲಾಯಿತು. ಈಗ LLR ರಸ್ತೆಯಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಆದರೆ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ನೀಡಲಾಗಿದ್ದ ರಿಲ್ಯಾಕ್ಸ್ ಹಾಗೆ ಮುಂದುವರೆದಿದೆ. ಹಾಗಾಗಿ ಎರಡೂ ಕಡೆ ವಾಹನಗಳು ಸಂಚರಿಸುತ್ತಿವೆ. ಅತ್ಯಂತ ಕಿರು ರಸ್ತೆಯಲ್ಲಿ ಎರಡು ಕಡೆ ವಾಹಗಳು ಓಡಾಡುತ್ತಿರುವುದರಿಂದ ದುರ್ಗಿಗುಡಿ ರಸ್ತೆಯಲ್ಲಿ ಪುನಃ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ಸಾಮಾಜಿಕ ಜಾಲತಾಣದಲ್ಲೂ ಆಕ್ರೋಶ

ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಒನ್ ವೇ ನಿಯಮ ಪಾಲನೆ ಆಗದಿರುವುದ್ದಕ್ಕೆ ಸಾಮಾಜಿಕ ಜಾಲತಾಣದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಅದರ ವಿಡಿಯೋ ಇಲ್ಲಿದೆ ⇒ CLICK HERE

ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಒನ್ ವೇ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಬೇಕು ಎಂಬ ಆಗ್ರಹವಿದೆ. ಇದರಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಪರಿಹಾರವಾಗಲಿದೆ.

ಇದನ್ನೂ ಓದಿ ⇒ ರಾತ್ರಿ ಬಾಗಿಲು ಹಾಕುವಾಗ ಅಂಗಡಿ ಕ್ಯಾಶ್ ಡ್ರಾದಲ್ಲಿಟ್ಟ ಲಕ್ಷ ಲಕ್ಷ ಹಣ ಬೆಳಗಾಗುವುದರಲ್ಲಿ ಮಾಯ


ನಿಮ್ಮೂರು, ನಿಮ್ಮಾ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment