SHIMOGA, 29 JULY 2024 : ಗಾಂಧಿ ಪಾರ್ಕ್ನಲ್ಲಿದ್ದ ಬೃಹತ್ ಮರವೊಂದು (Tree) ಧರೆಗುರುಳಿದೆ. ಬಾಲರಾಜ್ ಅರಸ್ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ವಾಹನ ಸಂಚಾರ ವ್ಯತ್ಯಯವಾಗಿದೆ.
ಗಾಂಧಿ ಪಾರ್ಕ್ನಲ್ಲಿದ್ದ ಬೃಹತ್ ಮರವೊಂದು ಸಂಜೆ ವೇಳೆಗೆ ಬುಡಮೇಲಾಗಿದೆ. ಭೋವಿ ಸಮುದಾಯ ಭವನದ ಮುಂಭಾಗ ಬಾಲರಾಜ ಅರಸ್ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿವೆ. ವಾಹನಗಳಿಗು ಹಾನಿಯಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಮರ ಬಿದ್ದಿರುವುದರಿಂದ ಬಾಲರಾಜ ಅರಸ್ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿದೆ. ಮಹಾವೀರ ವೃತ್ತದಿಂದ ಗೋಪಿ ಸರ್ಕಲ್ಗೆ ತೆರಳುವ ಮಾರ್ಗ ಸದ್ಯಕ್ಕೆ ಬಂದ್ ಮಾಡಲಾಗಿದೆ.
ಇದನ್ನೂ ಓದಿ ⇓
ವಿಐಎಸ್ಎಲ್ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200