ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಗಸ್ಟ್ 5ರಂದು ಅಡಿಗಲ್ಲು ಇಡಲಾಗುತ್ತಿದೆ. ಭೂಮಿ ಪೂಜೆ ವೇಳೆ ತುಂಗಾ ಮತ್ತು ಭದ್ರಾ ನದಿಯ ನೀರು ಬಳಸಲಾಗುತ್ತದೆ. ಹಾಗಾಗಿ ಇವತ್ತು ಇವೆರಡು ನದಿಗಳ ನೀರನ್ನು ಅಯೋಧ್ಯೆಗೆ ಕಳುಹಿಸಲಾಯಿತು.
ಎರಡು ನದಿಯ ನೀರಿನ್ನು ಸಂಗ್ರಹಿಸಿ ತರಲಾಗಿದ್ದು, ವಿಶ್ವ ಹಿಂದೂ ಪರಿಷತ್ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರ ಸಮ್ಮುಖದಲ್ಲಿ ನೀರನ್ನು ವಿಶೇಷವಾಗಿ ಪ್ಯಾಕ್ ಮಾಡಿ ಅಯೋಧ್ಯೆಗೆ ಕಳುಹಿಸಲಾಯಿತು.
ಭೂಮಿ ಪೂಜೆ ವೇಳೆ ದೇಶದ ಎಲ್ಲ ಪವಿತ್ರ ನದಿಗಳ ನೀರನ್ನು ಬಳಸಲು ಯೋಜಿಸಲಾಗಿದೆ. ಇದೇ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ನದಿಯ ನೀರನ್ನು ಕಳುಹಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200