ಶಿವಮೊಗ್ಗದಲ್ಲಿ ಕಳಪೆ ಕಾಮಗಾರಿ, ಬೋಗಸ್‌ ಬಿಲ್‌ ಆರೋಪ, ಇಬ್ಬರು ಇಂಜಿನಿಯರ್‌ಗಳು ಅಮಾನತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 20 JUNE 2023

SHIMOGA : ಜಲಜೀವನ್ ಮಿಷನ್ ಯೋಜನೆಯಲ್ಲಿ ಕಳಪೆ ಕಾಮಗಾರಿ ಹಾಗೂ ಬೋಗಸ್ ಬಿಲ್ ಮಾಡಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳನ್ನು ಅಮಾನತು (Suspend) ಮಾಡಲಾಗಿದೆ.

PARISHRAMA NEET ACADEMY SHIVAMOGGA LIVE

ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಸ್.ಬಿ.ಕೊಟ್ರೇಶ್ ಹಾಗೂ ಸಹಾಯಕ ಎಂಜಿನಿಯರ್ ಬಿ.ಶೇಖರ್ ನಾಯ್ಕ್ ಅಮಾನತುಗೊಂಡವರು.

ಇದನ್ನೂ ಓದಿ – ಇಂಜಿನಿಯರ್‌ ಪತ್ನಿ ಹತ್ಯೆ ಕೇಸ್‌, ಮನೆಯಲ್ಲಿದ್ದ 35 ಲಕ್ಷ ರೂ. ಹಣ ಮಿಸ್ಸಿಂಗ್‌, ಒಬ್ಬನ ಮೇಲೆ ಅನುಮಾನ, ಯಾರದು?

ದೂರುಗಳ ಆಧಾರದ ಮೇಲೆ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹುಣಸೋಡು, ಅಬ್ಬಲಗೆರೆ, ಬೆಳಲಕಟ್ಟೆ, ಮೇಲಿನ ಹನಸವಾಡಿ, ಬೇಡರ ಹೊಸಹಳ್ಳಿ, ಹೊಳೆಹಟ್ಟಿ ಗ್ರಾಮಗಳಲ್ಲಿ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ನೇತೃತ್ವದ  ತನಿಖಾ ತಂಡ ಪರಿಶೀಲನೆ ನಡೆಸಿದ್ದು ಕಳಪೆ ಕಾಮಗಾರಿ ಮಾಡಿರುವುದು ತಿಳಿದುಬಂದಿದೆ. ತನಿಖಾ ತಂಡದ ವರದಿ ಆಧಾರದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಬ್ಬರನ್ನು ಅಮಾನತು (Suspend) ಮಾಡಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment