SHIVAMOGGA LIVE NEWS | 8 FEBRURARY 2023
SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಆಲ್ಕೊಳದ ಗಣೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗಣೇಶ್ ಅವರು ಮನೆಗೆ ಬೀಗ ಹಾಕಿ ಪಕ್ಕದಲ್ಲಿರುವ ತಮ್ಮದೆ ಮನೆಯಲ್ಲಿ ರಾತ್ರಿ ಮಲಗಿದ್ದಾರೆ. ಬೆಳಗ್ಗೆ ಬಂದು ನೋಡಿದಾಗ, ಬಾಗಿಲಿಗೆ ಹಾಕಿದ್ದ ಬೀಗವನ್ನು ಮೀಟಿ ತೆಗೆದು ಕಳ್ಳತನ ಮಾಡಲಾಗಿತ್ತು.

ಬೀರುವಿನಲ್ಲಿಟ್ಟಿದ್ದ 20 ಸಾವಿರ ರೂ. ನಗದು, 20 ಸಾವಿರ ರೂ. ಬಂಗಾರದ ಬಿಳಿ ಹರಳಿನ ಉಂಗುರ, 22 ಸಾವಿರದ ಬಂಗಾರದ ಸರ, ಮಕ್ಕಳ ಬಂಗಾರ 6 ಉಂಗುರ, ಬೆಳ್ಳಿಯ ಬಿಳಿ ಹರಳಿನ ಉಂಗುರ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಡಿಕೊಪ್ಪದಲ್ಲು ಮನೆ ಕಳ್ಳತನ
ಗಾಡಿಕೊಪ್ಪದಲ್ಲಿ ನಾಗರತ್ನ ಎಂಬುವವರ ಮನೆಯಲ್ಲಿಯು ಕಳ್ಳತನವಾಗಿದೆ (Theft). ನಾಗರತ್ನ ಅವರು ಪತಿಯೊಂದಿಗೆ ಕೋಣಂದೂರಿನಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್
ಮನೆಯಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಒಟ್ಟು 5.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ವಿನೋಬನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಕಾರ್ಯಾಚರಣೆ, ರಾತ್ರೋರಾತ್ರಿ 25 ಮಂದಿ ವಶಕ್ಕೆ, ಕಾರಣವೇನು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



