ಶಿವಮೊಗ್ಗ ಪೊಲೀಸರ ಜೊತೆ ಸಚಿವ ಈಶ್ವರಪ್ಪ ಮೀಟಿಂಗ್, ಎರಡೇ ತಿಂಗಳಲ್ಲಿ ಗಾಂಜಾ, ಪುಡಿ ರೌಡಿಗಳ ಮಟ್ಟಹಾಕಲು ಸೂಚನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇನ್ನೆರಡು ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ಗಾಂಜಾ ಮಾರಾಟಗಾರರನ್ನು ಮಟ್ಟಹಾಕಬೇಕು. ರೌಡಿಗಳನ್ನು ನಿಗ್ರಹಿಸಬೇಕು. ಇದರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರ ಖಡಕ್ ಸೂಚನೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೊಲೀಸರ ಜೊತೆಗೆ ಇವತ್ತು ಸಭೆ ನಡೆಸಿದ ಸಚಿವ ಈಶ್ವರಪ್ಪ, ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಎರಡೇ ತಿಂಗಳು ಟೈಮ್

ಗಾಂಜಾ ನಿಯಂತ್ರಣಕ್ಕೆ ಎರಡು ತಿಂಗಳು ಕಾಲವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು. ಪೊಲೀಸ್ ಇಲಾಖೆ ಒಳಗೆ ಗಾಂಜಾ ಮಾರಾಟಗಾರರ ಜೊತೆಗೆ ಶಾಮೀಲಾದವರು ಯಾರಾದರೂ ಇದ್ದರೆ ಕೂಡಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.

https://www.facebook.com/liveshivamogga/videos/760155081397883/?t=144

ರೌಡಿ, ಪುಡಿ ರೌಡಿಗಳ ನಿಗ್ರಹಿಸಿ

ನಗರದಲ್ಲಿ ರೌಡಿಗಳು, ಪುಡಿ ರೌಡಿಗಳನ್ನು ಮಟ್ಟಹಾಕಬೇಕು. ವಾಹನಗಳಿಗೆ ಬೆಂಕಿ ಹಚ್ಚುವುದು, ಕೂಲಿ ಮಾಡುವವರ ಮನೆಗೆ ನುಗ್ಗಿ ದರೋಡೆ ಮಾಡುವ ಪ್ರಕರಣಗಳು ಸಂಭವಿಸಿವೆ. ಇಂತಹವರ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

https://www.facebook.com/liveshivamogga/videos/314006596450123/?t=0

ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್, ಡಿವೈಎಸ್‍ಪಿ ಈಶ್ವರ್ ಉಮೇಶ್ ನಾಯಕ್‍, ವಿವಿಧ ಠಾಣೆಯ ಇನ್ಸ್‍ಪೆಕ್ಟರ್‍ಗಳಾದ ವಸಂತ್ ಕುಮಾರ್, ಸಂಜೀವ್ ಕುಮಾರ್‍ ಸೇರಿದಂತೆ ಹಲವರು ಸಭೆಯಲ್ಲಿದ್ದರು.

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment