
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇನ್ನೆರಡು ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ಗಾಂಜಾ ಮಾರಾಟಗಾರರನ್ನು ಮಟ್ಟಹಾಕಬೇಕು. ರೌಡಿಗಳನ್ನು ನಿಗ್ರಹಿಸಬೇಕು. ಇದರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಖಡಕ್ ಸೂಚನೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೊಲೀಸರ ಜೊತೆಗೆ ಇವತ್ತು ಸಭೆ ನಡೆಸಿದ ಸಚಿವ ಈಶ್ವರಪ್ಪ, ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.

ಎರಡೇ ತಿಂಗಳು ಟೈಮ್
ಗಾಂಜಾ ನಿಯಂತ್ರಣಕ್ಕೆ ಎರಡು ತಿಂಗಳು ಕಾಲವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು. ಪೊಲೀಸ್ ಇಲಾಖೆ ಒಳಗೆ ಗಾಂಜಾ ಮಾರಾಟಗಾರರ ಜೊತೆಗೆ ಶಾಮೀಲಾದವರು ಯಾರಾದರೂ ಇದ್ದರೆ ಕೂಡಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.
ರೌಡಿ, ಪುಡಿ ರೌಡಿಗಳ ನಿಗ್ರಹಿಸಿ
ನಗರದಲ್ಲಿ ರೌಡಿಗಳು, ಪುಡಿ ರೌಡಿಗಳನ್ನು ಮಟ್ಟಹಾಕಬೇಕು. ವಾಹನಗಳಿಗೆ ಬೆಂಕಿ ಹಚ್ಚುವುದು, ಕೂಲಿ ಮಾಡುವವರ ಮನೆಗೆ ನುಗ್ಗಿ ದರೋಡೆ ಮಾಡುವ ಪ್ರಕರಣಗಳು ಸಂಭವಿಸಿವೆ. ಇಂತಹವರ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್ಪಿ ಈಶ್ವರ್ ಉಮೇಶ್ ನಾಯಕ್, ವಿವಿಧ ಠಾಣೆಯ ಇನ್ಸ್ಪೆಕ್ಟರ್ಗಳಾದ ವಸಂತ್ ಕುಮಾರ್, ಸಂಜೀವ್ ಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






