ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ‘ಎರಡು ರುಪಾಯಿ ಡಾಕ್ಟರ್ʼ (Doctor) ಎಂದೇ ಖ್ಯಾತರಾಗಿದ್ದ ಡಾ. ಬಿ.ಎಲ್.ಸುರೇಶ್ ತಲ್ಯಾಳ (72) ನಿಧನರಾಗಿದ್ದಾರೆ. ಜ್ಯೋತಿನಗರದ ಮನೆಯಲ್ಲಿ ಕಳೆದ ರಾತ್ರಿ ಹೃದಯಾಘಾತ ಸಂಭವಿಸಿತ್ತು.
ಹರಿಗೆ, ಒಡ್ಡಿನಕೊಪ್ಪ, ಮಲವಗೊಪ್ಪ, ಜ್ಯೋತಿನಗರ, ವಿದ್ಯಾನಗರ ಸೇರಿದಂತೆ ವಿವಿಧೆಡೆಯ ಜನರು ಡಾ. ಸುರೇಶ್ ತಲ್ಯಾಳ ಅವರ ಅಂತಿಮ ದರ್ಶನ ಪಡೆದರು. ಜ್ಯೋತಿನಗರದಲ್ಲಿ ಪಾರ್ವತಿ ಕ್ಲಿನಿಕ್ ನಡೆಸುತ್ತಿದ್ದ ಡಾ. ಸುರೇಶ್ ತಲ್ಯಾಳ ಅವರು ಎರಡು ರುಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿದ್ದರು. ಹರಿಗೆ ಮತ್ತು ಸುತ್ತಮುತ್ತಲ ಭಾಗದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಕೆಲವು ವರ್ಷದಿಂದ ಹಣವನ್ನೇ ಪಡೆಯದೆ ಚಿಕಿತ್ಸೆ ನೀಡುತ್ತಿದ್ದರು.
ಹಲವು ಜನಪ್ರತಿನಿಧಿಗಳು, ಸುತ್ತಮುತ್ತಲ ಬಡಾವಣೆ ನಿವಾಸಿಗಳು ವೈದ್ಯರಿಗೆ ಅಂತಿಮ ನಮನ ಸಲ್ಲಿಸಿದರು. ಡಾ. ಸುರೇಶ್ ತಲ್ಯಾಳ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಿತು.

ಇದನ್ನೂ ಓದಿ » ₹49 ಲಕ್ಷ ಹೂಡಿಕೆ ಮಾಡಿದ ಮಹಿಳೆಗೆ ₹3 ಕೋಟಿ ಲಾಭ, ಆಮೇಲೆ ಕಾದಿತ್ತು ದೊಡ್ಡ ಆಘಾತ
Doctor
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





