ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 DECEMBER 2022
ಶಿವಮೊಗ್ಗ : ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ ಇವತ್ತು 2 ಸಾವಿರಕ್ಕೂ ಹೆಚ್ಚು ಸೆಟ್ ದೋಸೆ ವಿತರಿಸಲಾಯಿತು. ನಗರದ 6 ಕಡೆ ಸೆಟ್ ದೋಸೆ (set dosa) ವಿತರಣೆ ಮಾಡಲಾಯಿತು.

ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 2,421 ಸೆಟ್ ದೋಸೆ ವಿತರಣೆ ಮಾಡಿದರು. ನಗರದ ಎಂ.ಆರ್.ಎಸ್, ಹೊಳೆ ಬಸ್ ನಿಲ್ದಾಣ, ಬಸ್ ನಿಲ್ದಾಣ, ಮೆಗ್ಗಾನ್ ಆಸ್ಪತ್ರೆ, ತರಕಾರಿ ಮಾರುಟಕಟ್ಟೆ ಸೇರಿದಂತೆ ಆರು ಕಡೆ ಜನರಿಗೆ ನೀಡಲಾಯಿತು.
ಬೆಳಗಿನ ಜಾವದಿಂದಲೆ ತಯಾರಿ (set dosa)
ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಗುರುನಾಥರ ವರ್ಧಂತಿ ಅಂಗವಾಗಿ ಭಕ್ತರು ದೋಸೆ ಹಂಚಿದರು. ಇದಕ್ಕಾಗಿ ಗುರು ಭಿಕ್ಷೆ ಬೇಡಿ ಅಕ್ಕಿ ಮತ್ತು ಇತರೆ ದವಸ ಸಂಗ್ರಹಿಸಿದ್ದರು. ಬೆಳಗಿನ ಜಾವ 3 ಗಂಟೆಯಿಂದಲೆ ಭಕ್ತರು ದೋಸೆ ಸಿದ್ಧಪಡಿಸಿ, ಅವುಗಳನ್ನು ಪ್ಯಾಕ್ ಮಾಡಿ ವಿತರಣೆ ವಿತರಣೆ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಗ್ಗಲು ಹಿಡಿದ ಅಡಕೆ, ಮುಳುಗಿದ ಭತ್ತದ ಗದ್ದೆ, ತಾಲೂಕುವಾರು ನಡೆಯುತ್ತಿದೆ ಸಮೀಕ್ಷೆ
ವರ್ಧಂತಿ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದು ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೆ ಗುರು ಭಕ್ತರ ಮನೆಗಳಲ್ಲಿ ಇಂದು ಸಂಜೆ ದೀಪ ಬೆಳಗಲಾಗುತ್ತದೆ.




LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – SHIVAMOGGA LIVE COMMUNITY



