SHIVAMOGGA LIVE NEWS
SHIMOGA | ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ (SAFARI) ಹಿರಿಯ ಹುಲಿ ಹನುಮ ಮೃತಪಟ್ಟಿದ್ದಾನೆ. ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹನುಮನಿಗೆ ಸಫಾರಿಯಲ್ಲಿ ವಿಶೇಷ ಆರೈಕೆ ಮಾಡಲಾಗುತ್ತಿತ್ತು. ಆದರೂ ವಯೋಸಹಜ ಸಮಸ್ಯೆ, ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಈ ಹಿಂದೆ ಸಫಾರಿಯಲ್ಲಿ ದೀರ್ಘ ಕಾಲ ಜೀವಿಸಿದ್ದ ಕೃತ್ತಿಕಾ ದಾಖಲೆಯನ್ನು ಹನುಮ ಸರಿಗಟ್ಟಿದ್ದಾನೆ. 19 ವರ್ಷ ಕಾಲ ಜೀವಿಸಿದ್ದ ಕೃತ್ತಿಕಾ 2016ರ ಆಗಸ್ಟ್ನಲ್ಲಿ ಕೊನೆಯುಸಿರೆಳೆದಿತ್ತು. ಹನುಮ ಕೂಡಾ 19 ವರ್ಷ ಕಾಲ ತುಂಬು ಜೀವಿಸಿ ಕೊನೆಯುಸಿರೆಳೆದಿದ್ದಾನೆ.
ಚಾಮುಂಡಿ ಎಂಬ ಹುಲಿ ರಾಮ, ವಾಲಿ ಮತ್ತು ಹನುಮನಿಗೆ ಜನುಮ ನೀಡಿತ್ತು. 2020ರ ಡಿಸೆಂಬರ್ನಲ್ಲಿ ವಾಲಿ, ಇದೇ ವರ್ಷ ಮೇನಲ್ಲಿ ರಾಮ ಎಂಬ ಹುಲಿಗಳು ಸಾವನ್ನಪ್ಪಿದ ಬಳಿಕ ಇವುಗಳ ಸಹೋದರ ಹನುಮ ಕೂಡಾ ಇಹಲೋಕ ತ್ಯಜಿಸಿದ್ದಾನೆ. ಇದೀಗ ಸಫಾರಿಯಲ್ಲಿ ಹುಲಿಗಳ ಸಂಖ್ಯೆ 4ಕ್ಕೆ ಇಳಿಕೆಯಾಗಿದೆ.
ಸಫಾರಿ ಇಲ್ಲವೇ ಪಾಣಿ ಸಂಗ್ರಹಾಲಯದಲ್ಲಿ ಹುಲಿಗಳ ಗರಿಷ್ಠ ಜೀವಿತಾವಧಿ 15 ರಿಂದ 17 ವರ್ಷ, ಆದರೆ ತ್ಯಾವರೆಕೊಪ್ಪ ಸಫಾರಿಯಲ್ಲಿ (SAFARI) ಸರಾಸರಿ ವಯಸ್ಸನ್ನೂ ಮೀರಿ ಹುಲಿಗಳು ಜೀವನ ನಡೆಸಿರುವುದು ವಿಶೇಷ. ಹುಲಿಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಅವುಗಳನ್ನು ಕ್ರಾಲ್ನಲ್ಲಿ ಇರಿಸಿ ನಿಗಾ ವಹಿಸಲಾಗುತ್ತದೆ. ಆದರೆ ಹುಲಿಗಳ ಒಂದು ಹಂತದ ಬಳಿಕ ಕ್ರಮೇಣ ಅಂಗಾಂಗ ವೈಫಲ್ಯದಂತಹ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತವೆ. ಇದೀಗ ಹನುಮನ ಸಾವಿಗೂ ಅಂಗಾಂಗ ವೈಫಲ್ಯವೇ ಕಾರಣವಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಧರ್ಮದರ್ಶಿ ಪಾರು, ಸಹೋದರ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






