SHIVAMOGGA LIVE NEWS | 16 MAY 2023
SHIMOGA : ಸ್ಮಾರ್ಟ್ ಸಿಟಿ (Smart City) ಯೋಜನೆಯ ಅಪೂರ್ಣ ಕಾಮಗಾರಿಯಿಂದ ಜೈಲ್ ವೃತ್ತದಲ್ಲಿ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ತಿರುವಿನಲ್ಲಿ ಕಾಮಗಾರಿ ಪೂರ್ಣಗೊಳ್ಳದೆ ಜೆಲ್ಲಿ ಕಲ್ಲುಗಳನ್ನು ಹಾಗೆ ಬಿಡಲಾಗಿದೆ. ಇದು ದ್ವಿಚಕ್ರ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ.
ಜೈಲ್ ವೃತ್ತದ ಒಂದು ಬದಿಯಲ್ಲಿ ಸ್ಮಾರ್ಟ್ ಸಿಟಿ (Smart City) ಯೋಜನೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಹೈಟೆಕ್ ಪೊಲೀಸ್ ಚೌಕಿ ನಿರ್ಮಿಸಿ, ಅದರ ಮುಂದೆ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ಕೈ ಬಿಡಲಾಗಿದೆ. ಕೆಲ ತಿಂಗಳಿಂದ ಇದೇ ಪರಿಸ್ಥಿತಿ ಇದೆ.
ದ್ವಿಚಕ್ರ ವಾಹನ ಸವಾರರಿಗೆ ಕಷ್ಟ
ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಜೆಲ್ಲಿ ಕಲ್ಲುಗಳನ್ನು ರಸ್ತೆ ಮೇಲೆ ಹಾಕಿ ಹಾಗೆಯೇ ಬಿಡಲಾಗಿದೆ. ಕುವೆಂಪು ರಸ್ತೆಯಿಂದ ಬರುವ ವಾಹನಗಳು ದುರ್ಗಿಗುಡಿ, ಎಲ್ಎಲ್ಆರ್ ರಸ್ತೆಗೆ ಹೋಗಬೇಕಿದ್ದರೆ ಇಲ್ಲಿ ಎಡಕ್ಕೆ ತಿರುವು ಪಡೆಯಬೇಕು. ಆದರೆ ತಿರುವಿನಲ್ಲಿ ಜೆಲ್ಲಿ ಕಲ್ಲುಗಳನ್ನು ಹಾಕಿರುವುದರಿಂದ ದ್ವಿಚಕ್ರ ವಾಹನ ಸವರರು ಮೈಯಲ್ಲ ಕಣ್ಣಾಗಿಸಿಕೊಂಡು ವಾಹನ ಚಲಾಯಿಸಬೇಕಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಇನ್ನು, ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ದುರ್ಗಿಗುಡಿ ಕಡೆಗೆ ತೆರಳುವ ವಾಹನಗಳು ಅಲ್ಲಿ ನಿಧಾನವಾಗಿ ಚಲಿಸುತ್ತವೆ. ಇದರಿಂದ ಜೈಲ್ ಸರ್ಕಲ್ನಲ್ಲಿ ಸಂಚಾರ ದಟ್ಟಣೆಯು ಉಂಟಾಗುತ್ತಿದೆ.
ಚರಂಡಿಗೆ ಹೊದಿಕೆಯಾದ ಅಂಬೇಡ್ಕರ್ ನಾಮಫಲಕ
ಜೈಲ್ ಸರ್ಕಲ್ನಲ್ಲಿ ಪೊಲೀಸ್ ಚೌಕಿ ಪಕ್ಕದಲ್ಲಿ ಚರಂಡಿ ಕಾಮಗಾರಿಯು ಪೂರ್ಣಗೊಂಡಿಲ್ಲ. ಇನ್ನೇನು ಮಳೆಗಾಲ ಶುರುವಾಗುತ್ತಿದೆ. ಮಳೆ ಜೋರಾದರೆ ಚರಂಡಿ ನೀರು ರಸ್ತೆಗೆ ನುಗ್ಗುವ ಸಾಧ್ಯತೆ ಇದೆ. ಚರಂಡಿ ಮೇಲೆ ಸ್ಲಾಬ್ಗಳನ್ನು ಮನಸೋಯಿಚ್ಛೆ ಹಾಕಲಾಗಿದೆ. ಒಂದು ಬದಿಯಲ್ಲಿ ಸ್ಲಾಬ್ ಹಾಕುವ ಬದಲು ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರಿನ ನಾಮಫಲಕವನ್ನೇ ಚರಂಡಿಗೆ ಮುಚ್ಚಲಾಗಿದೆ.
ಇದನ್ನೂ ಓದಿ – ಯಡಿಯೂರಪ್ಪ ತೋಟದ ಪಕ್ಕದಲ್ಲಿ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ ಮಂತ್ರ, ಸಂಸದ ರಾಘವೇಂದ್ರ ಹೇಳಿದ್ದೇನು?
ಜೈಲ್ ವೃತ್ತದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200