ಶಿವಮೊಗ್ಗಕ್ಕೆ ದಿಢೀರ್ ಬಂದ ಹೆಲಿಕಾಪ್ಟರ್, ಡಿಸಿಗೂ ಮಾಹಿತಿಯಿಲ್ಲ, ಪೊಲೀಸರಿಗೂ ತಿಳಿದಿಲ್ಲ, ವಶಕ್ಕೆ ಪಡೆದ ಜಿಲ್ಲಾಡಳಿತ, ಮುಂದೇನಾಯ್ತು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಫೆಬ್ರವರಿ 2020

ನಗರದ ಹೆಲಿಪ್ಯಾಡ್‌ನಲ್ಲಿ ಪೂರ್ವ ಪರವಾನಗಿ ಇಲ್ಲದೇ ಖಾಸಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ ಕಂಪನಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.

ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಕರೆತಂದ ಹೆಲಿಕಾಪ್ಟರ್ ಜಿಲ್ಲಾಡಳಿತದಿಂದ ಪೂರ್ವ ಪರವಾನಗಿ ಪಡೆಯಬೇಕು. ಆದರೆ, ಯಾವುದೇ ಮಾಹಿತಿ ನೀಡದೇ ಏಕಾಏಕಿ ಹೆಲಿಪ್ಯಾಡ್‌ನಲ್ಲಿ ಗುರುವಾರ ನಿಲ್ಲಿಸಲಾಗಿದೆ. ಮಾರಿಕಾಂಬ ಜಾತ್ರೆ ಪ್ರಯುಕ್ತ ಹೆಲಿಟೂರಿಸ್ಂಗೆ ಮಾತ್ರ ಪರವಾನಗಿ ನೀಡಲಾಗಿದೆ. ಅದನ್ನು ಬಿಟ್ಟು ಬೇರೆಯ ಹೆಲಿಕಾಪ್ಟರ್‌ಗಳನ್ನು ಲ್ಯಾಂಡ್ ಮಾಡುವುದಕ್ಕೆ ಅವಕಾಶವಿಲ್ಲ.

ನಿಯಮ ಮೀರಿ ಬೇರೆಯ ಹೆಲಿಕಾಪ್ಟರ್ ತಂದು ನಿಲ್ಲಿಸಲಾಗಿದೆ. ತಕ್ಷಣ ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿದ್ದೇ ಹೆಲಿಪ್ಯಾಡ್‌ನಲ್ಲೇ ವಿಚಾರಣೆಗೆ ಒಳಪಡಿಸಲಾಗಿದೆ. ನಂತರ, ನೋಟಿಸ್ ನೀಡಿ ಬಿಡುಗಡೆಗೊಳಿಸಿದೆ. ಆದರೆ, ಬರುವ ಬುಧವಾರದಂದು ಕಂಪನಿಯವರು ಇದಕ್ಕೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ, ಸಮರ್ಪಕ ಸ್ಪಷ್ಟನೆ ನೀಡದಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment