ಶಿವಮೊಗ್ಗ ಲೈವ್.ಕಾಂ | SHIMOGA | 29 ಫೆಬ್ರವರಿ 2020
ನಗರದ ಹೆಲಿಪ್ಯಾಡ್ನಲ್ಲಿ ಪೂರ್ವ ಪರವಾನಗಿ ಇಲ್ಲದೇ ಖಾಸಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ ಕಂಪನಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.
ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಕರೆತಂದ ಹೆಲಿಕಾಪ್ಟರ್ ಜಿಲ್ಲಾಡಳಿತದಿಂದ ಪೂರ್ವ ಪರವಾನಗಿ ಪಡೆಯಬೇಕು. ಆದರೆ, ಯಾವುದೇ ಮಾಹಿತಿ ನೀಡದೇ ಏಕಾಏಕಿ ಹೆಲಿಪ್ಯಾಡ್ನಲ್ಲಿ ಗುರುವಾರ ನಿಲ್ಲಿಸಲಾಗಿದೆ. ಮಾರಿಕಾಂಬ ಜಾತ್ರೆ ಪ್ರಯುಕ್ತ ಹೆಲಿಟೂರಿಸ್ಂಗೆ ಮಾತ್ರ ಪರವಾನಗಿ ನೀಡಲಾಗಿದೆ. ಅದನ್ನು ಬಿಟ್ಟು ಬೇರೆಯ ಹೆಲಿಕಾಪ್ಟರ್ಗಳನ್ನು ಲ್ಯಾಂಡ್ ಮಾಡುವುದಕ್ಕೆ ಅವಕಾಶವಿಲ್ಲ.
ನಿಯಮ ಮೀರಿ ಬೇರೆಯ ಹೆಲಿಕಾಪ್ಟರ್ ತಂದು ನಿಲ್ಲಿಸಲಾಗಿದೆ. ತಕ್ಷಣ ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿದ್ದೇ ಹೆಲಿಪ್ಯಾಡ್ನಲ್ಲೇ ವಿಚಾರಣೆಗೆ ಒಳಪಡಿಸಲಾಗಿದೆ. ನಂತರ, ನೋಟಿಸ್ ನೀಡಿ ಬಿಡುಗಡೆಗೊಳಿಸಿದೆ. ಆದರೆ, ಬರುವ ಬುಧವಾರದಂದು ಕಂಪನಿಯವರು ಇದಕ್ಕೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ, ಸಮರ್ಪಕ ಸ್ಪಷ್ಟನೆ ನೀಡದಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.
- ಶಿವಮೊಗ್ಗ ಹಾಪ್ಕಾಮ್ಸ್ಗೆ ನೂತನ ಅಧ್ಯಕ್ಷ, ಅವಿರೋಧ ಆಯ್ಕೆ
- ಶಿವಮೊಗ್ಗ ಜಿಲ್ಲೆಯಲ್ಲಿ ಹಸಿ ಶುಂಠಿ ಖರೀದಿ ಕೇಂದ್ರ ತೆರೆಯಲು ಸೂಚನೆ, ಮೀಟಿಂಗ್ನಲ್ಲಿ ಏನೆಲ್ಲ ಚರ್ಚೆಯಾಯ್ತು?
- 13 ರೈತರ ಹೋರಾಟಕ್ಕೆ ಜಯ, ಕಳಪೆ ಬೀಜ ಪೂರೈಸಿದವರಿಗೆ ಲಕ್ಷ ಲಕ್ಷ ರೂ. ದಂಡ, ಏನಿದು ಕೇಸ್?
- ಶಿವಮೊಗ್ಗದಲ್ಲಿ ಹಣ್ಣು, ಆಹಾರ ಮೇಳ, ಯಾವಾಗ? ಏನೆಲ್ಲ ಇರುತ್ತೆ? ಇಲ್ಲಿದೆ ಡಿಟೇಲ್ಸ್
- ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200