ಶಿವಮೊಗ್ಗ : ನಗರದ ಕಮಲಾ ನೆಹರು ಮಹಿಳಾ ಕಾಲೇಜು ಪಕ್ಕದಲ್ಲಿ ಮಹಾನಗರ ಪಾಲಿಕೆಗೆ ಸೇರಿದ ಜಾಗಕ್ಕೆ ಶುಕ್ರವಾರ ಭೇಟಿ (VISIT) ನೀಡಿದ ಉಪಲೋಕಾಯುಕ್ತ ನ್ಯಾ.ಫಣೀಂದ್ರ ಅಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಾಲೇಜಿಗೆ ಹೊಂದಿಕೊಂಡಿರುವ ಈ ಖಾಲಿ ಜಾಗದಲ್ಲಿ ತ್ಯಾಜ್ಯ, ಒಡೆದ ಮದ್ಯದ ಬಾಟಲಿಗಳು ತುಂಬಿದ್ದವು. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದರು. ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ಹಲವು ದೂರುಗಳನ್ನು ಸಲ್ಲಿಸಲಾಗಿತ್ತು.

ಈ ಹಿನ್ನೆಲೆ ಉಪಲೋಕಾಯುಕ್ತರು ಭೇಟಿ ನೀಡಿದರು. ತ್ಯಾಜ್ಯ, ಮದ್ಯದ ಬಾಟಲಿ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿ ಹಾಜರಿದ್ದ ಪಾಲಿಕೆ ಆಯುಕ್ತರ ಜತೆ ಚರ್ಚಿಸಿ, ಜಾಗದ ಸುತ್ತ ತಡೆಗೋಡೆ ನಿರ್ಮಿಸಿ, ಸ್ಬಚ್ಛತೆ ನಿರ್ವಹಿಸಬೇಕು ಎಂದು ಸೂಚಿಸಿದರು.
ಒಂದು ತಿಂಗಳ ಒಳಗೆ ಸದರಿ ಜಾಗವನ್ನು ಸಂಪೂರ್ಣ ಅಭಿವೃದ್ಧಿ ಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ತಿಳಿಸಿದರು.
ಎನ್ಇಎಸ್ ನಿರ್ದೇಶಕ ಎಂ.ಆರ್.ಅನಂತದತ್ತ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಪ್ರಾಂಶುಪಾಲ ಡಾ.ಆರ್.ಎಂ.ಜಗದೀಶ್, ಪಿ.ಆರ್.ಓ ಸಿ.ಎಂ.ನೃಪತುಂಗ ಮತ್ತಿತರರಿದ್ದರು.
ಉಪಲೋಕಾಯುಕ್ತರು ಭೇಟಿ ನೀಡಿದ ಕೆಲವೇ ನಿಮಿಷಗಳಲ್ಲಿ ಪಾಲಿಕೆಯ ಸಿಬ್ಬಂದಿ ಜಾಗದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದರು.

ಇದನ್ನೂ ಓದಿ – ಲಕ್ಷ ಲಕ್ಷ ಮೌಲ್ಯದ ಮಾಂಗಲ್ಯ ಸರ ಖರೀದಿಸಿ ಮನೆಗೆ ಹೋಗಿ ನೋಡಿದಾಗ ಕಾದಿತ್ತು ಆಘಾತ, ಆಗಿದ್ದೇನು?
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





