ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕೆ ವಿತರಣೆ ವೇಗವನ್ನು ಮತ್ತಷ್ಟು ಹೆಚ್ಚಳ ಮಾಡಬೇಕು ಎಂದು ಕಾಂಗ್ರೆಸ್, ಜೆಡಿಎಸ್ ಕಾರ್ಪೊರೇಟರ್ಗಳು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಕಾರ್ಪೊರೇಟರ್ಗಳು, ಪ್ರತಿ ವಾರ್ಡ್ನಲ್ಲೂ ಲಸಿಕೆ ನೀಡುವ ಕಾರ್ಯ ಮಾಡಬೇಕಿದೆ. ವಾರ್ಡ್ಗಳಲ್ಲಿ ಇರುವ ಸರ್ಕಾರಿ ಶಾಲೆ, ಅಂಗನವಾಡಿಗಳಲ್ಲಿ ಲಸಿಕೆ ವಿತರಣೆ ಮಾಡಬೇಕು. ಆಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲರಿಗೂ ಶೀಘ್ರದಲ್ಲಿ ಲಸಿಕೆ ನೀಡಲು ಸಾದ್ಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದರು.
ಇದೆ ವೇಳೆ ಚಿಕ್ಕಲ್ ಸರ್ಕಾರಿ ಶಾಲೆಯಲ್ಲಿ ಲಸಿಕೆ ನೀಡಲು ಬೇಕಾದ ವ್ಯವಸ್ಥೆ ಮಾಡಲಾಗುತ್ತದೆ. ಹಾಗೆಯೇ ಮಿಲ್ಲತ್ ಶಾಲೆ ಮತ್ತು ಜೆ.ಪಿ.ನಗರದಲ್ಲೂ ಲಸಿಕೆ ಪಡೆಯಲು ಜನರು ಮುಂದೆ ಬಂದಿದ್ದಾರೆ. ಅವರೆ ಎಲ್ಲ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. ಇಂತಹ ಕಡೆಗಳಿಗೆ ಲಸಿಕೆಯ ವ್ಯವಸ್ಥೆ ಮಾಡಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಮನವಿ ಮಾಡಿದರು.
ಕಾರ್ಪೊರೇಟರ್ಗಳಾದ ಹೆಚ್.ಸಿ.ಯೋಗೇಶ್, ನಾಗರಾಜ ಕಂಕಾರಿ, ಆರ್.ಸಿ.ನಾಯ್ಕ್ , ಕಾಂಗ್ರೆಸ್ ಮುಖಂಡ ರಂಗನಾಥ್ ಸೇರಿದಂತೆ ಹಲವರು ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






