ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಪಕ್ಷ-ಜಾತಿಗೆ ಸೀಮಿತವಾಗದೆ ಎಲ್ಲ ಸಮಾಜದ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ನಾಗರಿಕ ಸನ್ಮಾನ ಹಮ್ಮಿಕೊಂಡಿರುವುದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಇದನ್ನೂ ಓದಿ | ಯಡಿಯೂರಪ್ಪ ಅವರಿಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಅನುಶ್ರೀ, ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರಿಂದ ಭಾವಾಭಿನಂದನೆ
ಸಿಎಂ ಜನ್ಮದ ದಿನದ ಹಿನ್ನೆಲೆಯಲ್ಲಿ ಫೆ.28ರಂದು ನಗರದ ಫ್ರೀಡಂಪಾರ್ಕ್ನಲ್ಲಿ ನಾಗರಿಕ ಸನ್ಮಾನ ಹಮ್ಮಿಕೊಂಡಿದ್ದು ವಿವಿಧ ಸಂಘಟನೆಗಳು ಸಮಾರಂಭಕ್ಕೆ ಕೈಜೋಡಿಸಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಯಡಿಯೂರಪ್ಪ ಅವರು ಸಿಎಂ ಆದ ಮೇಲೆ ಶಿವಮೊಗ್ಗದ ಚಿತ್ರಣ ಬದಲಾಗಿದೆ. ಸಾವಿರಾರು ಕೋಟಿ ರೂ. ಅನುದಾನ ಸಿಕ್ಕಿದೆ. ಸರ್ಕಾರಿ ನೌಕರರ ಬಹುತೇಕ ಎಲ್ಲ ಬೇಡಿಕೆಗಳನ್ನೂ ಈಡೇರಿಸಿದ್ದಾರೆ. ಜತೆಗೆ ವಿಮಾನ ನಿಲ್ದಾಣ, ನೀರಾವರಿ ಯೋಜನೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಸಾಹಿತ್ಯ ಚಟುವಟಿಕೆ, ರೈಲ್ವೆ ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕೈಗಾರಿಕಾ ಮತ್ತು ವಾಣಿಜ್ಯ ಸಂಘ, ಪ್ರೆಸ್ಟ್ರಸ್ಟ್, ಮಾಚೇನಹಳ್ಳಿ ಕೈಗಾರಿಕಾ ಸಂಘ ಸೇರಿ ವಿವಿಧ ಸಂಘ ಸಂಸ್ಥೆಗಳಿಗೆ ನೆರವು ನೀಡಿದ್ದಾರೆ ಎಂದರು.
ಪ್ರೆಸ್ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಸಾಪ ಜಿಲ್ಲಾಧ್ಯಕ್ಷ ಡಿ.ಬಿ.ಶಂಕರಪ್ಪ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಹೆಗೆಡೆ, ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ರಂಗಪ್ಪ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















