‘ಸೂಕ್ತ ಬೆಳಕಿಲ್ಲ, ಕಿರಿದಾದ ಪ್ರವೇಶ ದ್ವಾರ’, ಶಿವಮೊಗ್ಗ ಡಿಸಿ ಕಚೇರಿ ಮುಂದೆ ವ್ಯಾಪಾರಿಗಳ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JULY 2024

SHIMOGA : ವಿನೋಬನಗರ 100 ಅಡಿ ರಸ್ತೆ ಶಿವಾಲಯ ಪಕ್ಕದಲ್ಲಿನ ಮಾರುಕಟ್ಟೆ (Market) ಸಂಕೀರ್ಣಕ್ಕೆ ಸೂಕ್ತ ಬೆಳಕಿನ ವ್ಯವಸ್ಥೆ ಮತ್ತು ಪ್ರವೇಶದ್ವಾರದ ನ್ಯೂನತೆ ಸರಿಪಡಿಸುವಂತೆ ಆಗ್ರಹಿಸಿ ಜೆಡಿಎಸ್ ನೇತೃತ್ವದಲ್ಲಿ ವ್ಯಾಪಾರಸ್ಥರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶಾಂತವೇರಿ ಗೋಪಾಲಗೌಡ ವೃತ್ತದಿಂದ ಭಗತ್‌ಸಿಂಗ್ ವೃತ್ತದವರೆಗೆ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರಿಗಾಗಿ ಶಿವಾಲಯದ ಬಳಿ ಮಹಾನಗರ ಪಾಲಿಕೆಯಿಂದ ಮಾರುಕಟ್ಟೆ ನಿರ್ಮಿಸಲಾಗಿದೆ. ಹೂವು, ಹಣ್ಣು ಮತ್ತು ತರಕಾರಿ ಮಾರಾಟ ಮಾಡುತ್ತಿದ್ದ 72 ವ್ಯಾಪಾರಿಗಳನ್ನು ಗುರುತಿಸಿ ಮಳಿಗೆಗಳನ್ನು ಒದಗಿಸಲಾಗಿದೆ.

ಈ ಮಾರುಕಟ್ಟೆ ಪ್ರಾಂಗಣದ ಪ್ರವೇಶ ದ್ವಾರ ಬಹಳ ಚಿಕ್ಕದಿದೆ. ಅಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಾಗಿರುದೆ. ಇದರಿಂದ ಸಾರ್ವಜನಿಕರು ಪ್ರಾಂಗಣದೊಳಗೆ ಬರುವುದಿಲ್ಲ. ಗ್ರಾಹಕರಿಲ್ಲದ ಕಾರಣಕ್ಕೆ ವ್ಯಾಪಾರಿಗಳು ಮತ್ತೆ ಬೀದಿಯಲ್ಲಿ ಕುಳಿತು ವ್ಯಾಪಾರ ಮಾಡುವಂತಾಗಿದೆ. ಹೀಗಾಗಿ ಪ್ರಾಂಗಣದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಿ ಪ್ರವೇಶ ದ್ವಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿ.ಸುರೇಶ್, ನರಸಿಂಹ, ಶ್ಯಾಮ್, ದಯಾನಂದ್, ಸಂಜಯ್, ವಿನಯ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ – ಅರಣ್ಯಾಧಿಕಾರಿಗಳ ದಾಳಿ, ವಾಹನ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್‌, ಮೂವರು ಎಸ್ಕೇಪ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment