SHIVAMOGGA LIVE NEWS | 23 FEBRUARY 2024
SHIMOGA : ಉದ್ಘಾಟನೆ ಬೆನ್ನಿಗೆ ವಿದ್ಯಾನಗರ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಹೊಳೆಹೊನ್ನೂರು ರಸ್ತೆಗೆ ತೆರಳುವವರು ಮತ್ತು ಆ ಭಾಗದಿಂದ ಶಿವಮೊಗ್ಗ ಕಡೆಗೆ ಬರುವ ಬಹುತೇಕ ವಾಹನಗಳು ಸೇತುವೆ ಮೇಲೆ ಸಂಚರಿಸಿದವು. ಬಹುತೇಕರು ಹೊಸ ಸೇತುವೆ ಮೇಲೆ ವಾಹನ ಚಲಾಯಿಸಿ ಸಂಭ್ರಮಿಸಿದರು.
ಟೇಪ್ ಕಟ್ ಮಾಡಿದ ಕೇಂದ್ರ ಸಚಿವ
ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ವಿದ್ಯಾನಗರ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಇದ್ದರು.
ವಾಹನ ಸಂಚಾರ ಆರಂಭ
ಉದ್ಘಾಟನೆ ಬೆನ್ನಿಗೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ. ವೃತ್ತಾಕಾರದ ಸೇತುವೆಯಾಗಿರುವುದರಿಂದ ಬಹುತೇಕ ವಾಹನ ಸವಾರರು ಕುತೂಹಲಕ್ಕಾಗಿ ಸೇತುವೆ ಮೇಲೆ ವಾಹನ ಚಲಾಯಿಸಿದರು. ಹಲವರು ಸೇತುವೆಯ ಒಂದು ತುದಿಯಿಂದ ಇನ್ನೊಂದು ತುದಿಗೆ ಹೋಗಿ ಯು ಟರ್ನ್ ಮಾಡಿ ಬರುತ್ತಿದ್ದರು. ಇನ್ನು, ಸೇತುವೆ ಮೇಲೆ ವಾಹನಗಳನ್ನು ನಿಲ್ಲಿಸಿ ಸೆಲ್ಫಿ, ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಇದನ್ನೂ ಓದಿ – ವಿದ್ಯಾನಗರದಲ್ಲಿ ರೈಲ್ವೆ ಮೇಲ್ಸೇತುವೆ ಪಕ್ಕದಲ್ಲಿ ಕೆಳ ಸೇತುವೆಗೆ ಒತ್ತಾಯ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200